ಮಂಗಳೂರು | ಕುಳಾಯಿ ಸಮೀಪ ಕಾರು ಅಪಘಾತ; ಮಹಿಳೆ ಸಾವು, ಮೂವರು ಗಂಭೀರ

Prasthutha|

ಮಂಗಳೂರು : ನಗರದ ಹೊರವಲಯ ಕುಳಾಯಿ ಸಮೀಪ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

- Advertisement -

ಮೃತ ಮಹಿಳೆಯನ್ನು ಮೂಲತಃ ಕೃಷ್ಣಾಪುರ ಚೊಕ್ಕಬೆಟ್ಟುವಿನ, ಪ್ರಸ್ತುತ ಬೋಂದೇಲ್ ನಲ್ಲಿ ವಾಸಿಸುತ್ತಿದ್ದ ಸುಹಾನಾ (26) ಎಂದು ಗುರುತಿಸಲಾಗಿದೆ.

ಕಾರಿನಲ್ಲಿ ಸುಹಾನಾರ ಸಹೋದರಿ ಫಾತಿಮಾ ಶೌರೀನ್, ಸಹೋದರರಾದ ರಾಹಿಲ್ ಶಮೀಲ್ ಮತ್ತು ರಾಝಿಕ್ ಶಹಾನ್ ಎಂಬವರಿದ್ದು, ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಚಿಕ್ಕಮಗಳೂರಿನಲ್ಲಿ ಇಂದು ನಡೆಯಲಿರುವ ಮದುವೆ ಕಾರ್ಯಕ್ರಮವೊಂದಕ್ಕೆ ತೆರಳಲು ಸಿದ್ಧತೆಯಲ್ಲಿದ್ದ ಸಹೋದರ, ಸಹೋದರಿಯರು, ಆಹಾರ ಪಾರ್ಸೆಲ್ ಮಾಡಿಸಿಕೊಂಡು ಕೃಷ್ಣಾಪುರ ಚೊಕ್ಕಬೆಟ್ಟುವಿಗೆ ತೆರಳುತ್ತಿದ್ದ ವೇಳೆ ಕುಳಾಯಿ ಬಳಿ ಅಪಘಾತ ಸಂಭವಿಸಿದೆ. ಕಾರು ಚಲಾಯಿಸುತ್ತಿದ್ದ ರಾಹುಲ್ ಶಮೀಮ್ ಗೆ ವಿರುದ್ಧ ದಿಕ್ಕಿನಲ್ಲಿ ಮತ್ತೊಂದು ಕಾರು ಬಂದಂತಾಗಿ ಅದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ, ನಿಯಂತ್ರಣ ಕಳೆದುಕೊಂಡು ಕಾರು ಮರಕ್ಕೆ ಢಿಕ್ಕಿ ಹೊಡೆಯಿತು ಎನ್ನಲಾಗಿದೆ. ಸುಹಾನಾ ಅವರು ಪತಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ.   

Join Whatsapp