ಹುಬ್ಬಳ್ಳಿ ಗಲಭೆಗೆ ಪ್ರಚೋದಿಸಿದ ಆರೋಪಿ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆಗೆ ಹಾಜರು

Prasthutha|

ಹುಬ್ಬಳ್ಳಿ: ವಿವಾದಾತ್ಮಕ ವಾಟ್ಸ್ ಆ್ಯಪ್ ಸ್ಟೇಟಸ್ ಹಾಕಿ ಹಳೇ ಹುಬ್ಬಳ್ಳಿಯಲ್ಲಿ ಗಲಭೆಗೆ ಕಾರಣವಾಗಿ ಬಂಧಿತನಾಗಿರುವ ಆರೋಪಿ ಅಭಿಷೇಕ್ ಹಿರೇಮಠನಿಗೆ ಬಿಗಿ ಪೊಲೀಸ್ ಭದ್ರತೆಯಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.  

- Advertisement -

 ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾಗಿರುವ ಅಭಿಷೇಕ್  ಹಿರೇಮಠನನ್ನು ಇಂದು ಬೆಳಗ್ಗೆ ಪೊಲೀಸರು ಇಲ್ಲಿನ ಉಪ ಕಾರಾಗೃಹದಿಂದ ನಗರದ ಪ್ರಿಯದರ್ಶಿನಿ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಕ್ಕೆ ಭದ್ರತೆಯಲ್ಲಿ ಕರೆತಂದರು. ಪರೀಕ್ಷೆ ಬರೆಯಲು ಆರೋಪಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿದೆ. ಪೊಲೀಸ್ ಭದ್ರತೆಯಲ್ಲೇ ಆತ ಪರೀಕ್ಷೆ ಬರೆಯುತ್ತಿದ್ದಾನೆ.



Join Whatsapp