Home ಟಾಪ್ ಸುದ್ದಿಗಳು ಮದುವೆಯಾಗುವುದಾಗಿ ವಂಚಿಸಿ ಅತ್ಯಾಚಾರ ಆರೋಪ; ಶಿವಮೊಗ್ಗ ಬಿಜೆಪಿ ಮುಖಂಡ ಅರೆಸ್ಟ್

ಮದುವೆಯಾಗುವುದಾಗಿ ವಂಚಿಸಿ ಅತ್ಯಾಚಾರ ಆರೋಪ; ಶಿವಮೊಗ್ಗ ಬಿಜೆಪಿ ಮುಖಂಡ ಅರೆಸ್ಟ್

ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಆಕೆಯಿಂದಲೇ ಹಣ ಪಡೆದು ವಂಚಿಸಿ ಆರೋಪದಲ್ಲಿ ಬಿಜೆಪಿ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.


ಶಿವಮೊಗ್ಗ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಮುಖ್ ಆಗಿರುವ ಶರತ್ ಕಲ್ಯಾಣಿ ವಿರುದ್ಧ ಜುಲೈ 26ರಂದು ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ಶರತ್ ನಾಪತ್ತೆಯಾಗಿದ್ದ. ಇದೀಗ ಶರತ್ ವಿಜಯಪುರದ ಬಳಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಶರತ್ ಕಲ್ಯಾಣಿಯು ತನಗೆ ಮದುವೆಯಾಗಿರುವ ಮಾಹಿತಿ ಮುಚ್ಚಿಟ್ಟು ‘ನಾನಿನ್ನು ಅವಿವಾಹಿತ. ನಿನ್ನನ್ನು ಪ್ರೀತಿಸುತ್ತೇನೆ, ಮದುವೆಯಾಗಿ ನಿನಗೆ ಬಾಳು ಕೊಡುತ್ತೇನೆ ಎಂದು ನಂಬಿಸಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದ’ ಎಂದು ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿರುವ 43 ವರ್ಷದ ವಿಚ್ಛೇದಿತ ಮಹಿಳೆ ದೂರು ನೀಡಿದ್ದರು.


ಶರತ್ ಗೆ ಮಹಿಳೆಯು ಹಲವು ಬಾರಿ ಹಣ ನೀಡಿದ್ದು, ಒಟ್ಟು ನಾಲ್ಕು ಲಕ್ಷ ಹಣ ನಾಲ್ಕು ಲಕ್ಷ ಹಣವನ್ನು ನೀಡಿದ್ದರು. ನಂತರ ಮಹಿಳೆ ಮದುವೆಗೆ ಒತ್ತಾಯಿಸಿದಾಗ ಶರತ್ ಆಕೆಯ ಮನೆ ಕಡೆ ಹೋಗುವುದನ್ನು ನಿಲ್ಲಿಸಿದ್ದಲ್ಲದೆ, ಫೋನ್ ಸಂಪರ್ಕವನ್ನೂ ಕಡಿದುಕೊಂಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Join Whatsapp
Exit mobile version