ಯುವತಿಯ ಮೇಲೆ ಆ್ಯಸಿಡ್ ದಾಳಿ: ಗ್ಯಾಂಗ್ರಿನ್ ನಿಂದ ಬಳಲುತ್ತಿರುವ ಆರೋಪಿ !

Prasthutha|

- Advertisement -

ಬೆಂಗಳೂರು: ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವತಿ ಮೇಲೆ ಆ್ಯಸಿಡ್ ಎರಚಿದ್ದ ವಿಕೃತ ಪ್ರೇಮಿ ನಾಗೇಶ್ ಮಾಡಿದ ತಪ್ಪಿಗೆ ಜೈಲು ಶಿಕ್ಷೆ ಅನುಭವಿಸುತ್ತಿರುವುದರ ಜೊತೆಗೆ
ಕಳೆದ ಆರು ತಿಂಗಳಿಂದ ನಿರಂತರವಾಗಿ ಗ್ಯಾಂಗ್ರಿನ್ ನಿಂದ ಬಳಲುತ್ತಿದ್ದಾನೆ .

ಕಳೆದ ಆರು ತಿಂಗಳಿಂದ ನಿರಂತರವಾಗಿ ಗ್ಯಾಂಗ್ರಿನ್
ಲಕ್ಷಣಗಳು ಕಂಡು ಬಂದಿದ್ದು, ನಡೆದಾಡಲು ಆಗದೆ ವಿಕ್ಟೋರಿಯಾ ಆಸ್ಪತ್ರೆ ಮತ್ತು ಜೈಲಿನ ಆಸ್ಪತ್ರೆ ವಾರ್ಡ್​ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

- Advertisement -

ತಾನು ಪ್ರೀತಿಸಿದ ಯುವತಿ ತನಗೆ ಸಿಗಲಿಲ್ಲ. ಹೀಗಾಗಿ ಆಕೆ ಬೇರೆ ಯಾರಿಗೂ ಸಿಗಬಾರದು ಎಂದು ಈತ ಆಕೆಯ ಮುಖಕ್ಕೆ ಆ್ಯಸಿಡ್ ಎರಚಿದ್ದ. ಕಡೆಗೆ ತಮಿಳುನಾಡಿನ ದೇವಸ್ಥಾನದಲ್ಲಿ ಸ್ವಾಮೀಜಿಯ ವೇಷಭೂಷಣ ತೊಟ್ಟು ತಲೆಮರೆಸಿಕೊಂಡಿದ್ದ. ಕಾಮಾಕ್ಷಿ ಪಾಳ್ಯ ಪೊಲೀಸರು ಆತನನ್ನು ಪತ್ತೆ ಮಾಡಿ ಅರೆಸ್ಟ್ ಮಾಡಿದ್ದರು. ಜೈಲಿನಲ್ಲಿರುವ ಆ್ಯಸಿಡ್ ನಾಗನಿಗೆ ಇದೀಗ ಗ್ಯಾಂಗ್ರೀನ್ ಬಂದು ಚಿಕಿತ್ಸೆ ಸರಿಯಾಗಿ ಸಿಗದೇ ಬಳಲುತ್ತಿದ್ದಾನೆ.

Join Whatsapp