ರಾಜ್ಯಾದ್ಯಂತ ಮಾದಕ ವಸ್ತು ಮಾಫಿಯಾ ನಿಗ್ರಹಕ್ಕೆ ಕ್ರಮ: ಆರಗ ಜ್ಞಾನೇಂದ್ರ

Prasthutha|

ಬೆಳಗಾವಿ: ರಾಜ್ಯಾದ್ಯಂತ ಮಾದಕ ವಸ್ತು ಮಾಫಿಯಾ ನಿಗ್ರಹಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮಾದಕ ವಸ್ತು ಹಾವಳಿ ಸಾಮಾಜಿಕ ಪಿಡುಗಾಗಿದ್ದು, ಸಮಾಜ ಜಾಗೃತವಾದರೆ ಮಾತ್ರ ಇದನ್ನು ತಡೆಗಟ್ಟಲು ಸಾಧ್ಯ. ಪೊಲೀಸ್ ಇಲಾಖೆ ಈ ಕುರಿತು ವಿಶೇಷ ಒತ್ತು ನೀಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಸಭೆಯಲ್ಲಿಂದು ಹೇಳಿದರು.

- Advertisement -

ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಸುಕುಮಾರ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಟನ್ ಗಟ್ಟಲೆ ಮಾದಕ ವಸ್ತುಗಳನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ; ಕಾಲೇಜು ವಿದ್ಯಾರ್ಥಿಗಳು ವ್ಯಸನಿಗಳಾಗುತ್ತಿದ್ದಾರೆ. ಗಸ್ತು ಪೊಲೀಸ್ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದ್ದು, ಈ ಜಾಲವನ್ನು ನಿಗ್ರಹಿಸಲು ರಾಜ್ಯದ ಮೂಲೆ ಮೂಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದರು.

Join Whatsapp