ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಪ್ರಚೋದನಕಾರಿ ಪೋಸ್ಟ್’ಗಳ ಮೇಲೆ ಕ್ರಮ: ದ.ಕ. ಜಿಲ್ಲಾಧಿಕಾರಿ

Prasthutha|

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರ ಮೇಲೆ ನಿಗಾ ವಹಿಸಲಾಗಿದ್ದು, ಅದನ್ನು ಮೇಲ್ವಿಚಾರಣೆ ಮಾಡಿ ಅವರ ಮೇಲೆ ಪ್ರಕರಣ ದಾಖಲು ಮಾಡಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಹೇಳಿದ್ದಾರೆ.

- Advertisement -

ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯ ಪ್ರಮುಖ ಕಲೆ ಯಕ್ಷಗಾನ, ಕೋಲ ಸೇರಿದಂತೆ ಯಾವುದೇ ಧಾರ್ಮಿಕ ಆಚರಣೆ, ಕಾರ್ಯಕ್ರಮಗಳಿಗೆ ನಿರ್ಬಂಧ ಇರುವುದಿಲ್ಲ. ಆದರೆ, ಈ ಕಾರ್ಯಕ್ರಮಗಳಲ್ಲಿ ರಾಜಕೀಯ ಮುಖಂಡರು ಭಾಗವಹಿಸುವುದು, ಕಾರ್ಯಕರ್ತರಿಂದ ಪ್ರಚಾರ ನಡೆಸಿ, ಮತದಾರರ ಓಲೈಕೆ ಕಂಡುಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಸಾರ್ವಜನಿಕರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ದೂರುಗಳನ್ನು ಸಲ್ಲಿಸಲು ಸಿ- ವಿಜಿಲ್ ಮೊಬೈಲ್ ಆಪ್ ಅಭಿವೃದ್ಧಿಪಡಿಸಲಾಗಿದೆ. ಈ ಆಪ್ ಮೂಲಕ ಜಿಲ್ಲೆಯ ಚುನಾವಣೆಗೆ ಸಂಬಂಧಿಸಿದ ಉಲ್ಲಂಘನೆ ಪ್ರಕರಣಗಳ ಬಗ್ಗೆ ಸಾರ್ವಜನಿಕರು ಫೋಟೋ ಹಾಗೂ ವೀಡಿಯೋ ಮೂಲಕ ದೂರು ಸಲ್ಲಿಸಬಹುದು ಎಂದು ಹೇಳಿದ್ದಾರೆ.

- Advertisement -

ಇನ್ನು ಚುನಾವಣಾ ಪೂರ್ವ ತಪಾಸಣೆ ವೇಳೆ 10 ಲಕ್ಷ ರೂ., 200 ಲೀಟರ್ ಮದ್ಯ ಮತ್ತು 65 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.



Join Whatsapp