Home ಟಾಪ್ ಸುದ್ದಿಗಳು ಶೆಟ್ಟರ್ ಹೋಗಿದ್ದೇ ಒಳ್ಳೆಯದು ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ: ಡಿಕೆ ಶಿವಕುಮಾರ್

ಶೆಟ್ಟರ್ ಹೋಗಿದ್ದೇ ಒಳ್ಳೆಯದು ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ: ಡಿಕೆ ಶಿವಕುಮಾರ್

ಬೆಂಗಳೂರು: ನೀತಿ, ಸಿದ್ಧಾಂತದಡಿ ರಾಜಕೀಯ ಮಾಡುವವರು ನಾವು. ಅಲ್ಪಸಂಖ್ಯಾತ ಸಮುದಾಯ ಜಗದೀಶ್ ಶೆಟ್ಟರ್ ರನ್ನ ಒಪ್ಪಿರಲಿಲ್ಲ. ಇದರಿಂದ ನಮ್ಮ ಪಕ್ಷ ಸಂಘಟನೆಗೂ ಕಷ್ಟ ಆಗುತ್ತಿತ್ತು. ಶೆಟ್ಟರ್ ಹೋಗಿದ್ದೇ ಒಳ್ಳೆಯದು ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆಯಾದ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ತೀವ್ರ ವಾಗ್ದಾಳಿ ನಡೆಸಿದರು. ಶೆಟ್ಟರ್ ಅವರು ನಮ್ಮ ಪಕ್ಷ ಬಂದು ಸೇರಿದ್ದರು. ಚುನಾವಣೆ ಮುಂಚಿತವಾಗಿ ನಮಗೆ ಕಾಂಗ್ರೆಸ್ ಅಲ್ಲಿ ಗೆಲ್ಲುತ್ತದೆ ಎಂಬ ವಿಶ್ವಾಸ ಇತ್ತು. ಬಿಜೆಪಿ ವಿರುದ್ಧ ದೊಡ್ಡ ದೊಡ್ಡ ಆರೋಪ ಮಾಡಿ ಕಾಂಗ್ರೆಸ್ ಸೇರಿದ್ದರು. ನಮ್ಮ ಪಕ್ಷದ ಕಾರ್ಯಕರ್ತರ ಟಿಕೆಟ್ ಅವರಿಗಾಗಿ ನಾವು ತ್ಯಾಗ ಮಾಡಿದೆವು. ಮಾಜಿ ಸಿಎಂ ಎಂಬ ಘನತೆಗೆ ಗೌರವ ಕೊಟ್ಟು ಟಿಕೆಟ್ ನೀಡಿದೆವು. ಸೋತರೂ ಕೂಡ ಅವರನ್ನು ನಂಬಿ ನಾವು ಅವರನ್ನು ಎಂಎಲ್ಸಿ ಮಾಡಿದೆವು. ಏಕಾಏಕಿ ರಾಜೀನಾಮೆ ನೀಡಿ ಪಕ್ಷ ಬಿಟ್ಟು ಹೋಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Join Whatsapp
Exit mobile version