ಕಾರ್ಯಕರ್ತರನ್ನು ಪ್ರಚೋದಿಸಿ ಜೀವ ಬೆದರಿಕೆ । ನಳಿನ್ ಕುಮಾರ್ ಕಟೀಲ್ ವಿರುದ್ಧ ಹರಿಹಾಯ್ದ ಕಾಂಗ್ರೆಸ್ ಮುಖಂಡ ಹರಿಪ್ರಸಾದ್

Prasthutha|

ಬೆಂಗಳೂರು: ‘ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನನ್ನ ವಿರುದ್ಧ ಪಕ್ಷದ ಕಾರ್ಯಕರ್ತರನ್ನು ಪ್ರಚೋದಿಸಿ, ಜೀವ ಬೆದರಿಕೆ ಹಾಕಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಆರೋಪಿಸಿ ಹರಿಹಾಯ್ದಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಹರಿಪ್ರಸಾದ್ ಅವರು, ನಳಿನ್ ಕುಮಾರ್ ಕಟೀಲ್, ನನ್ನ ವಿರುದ್ಧ ಪ್ರಚೋದನಾಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಆತನ ಮಾತಿನಿಂದ ಪ್ರಚೋದನೆಗೆ ಒಳಗಾಗಿರುವ ಬಿಜೆಪಿ ಕಾರ್ಯಕತರು ನನಗೆ ಅಪಾಯ ತಂದೊಡ್ಡುವ ಸಾಧ್ಯತೆಯಿದೆ ಎಂಬ ಮಾಹಿತಿಯಿದೆ ಎಂದು ತಿಳಿಸಿದರು.

ಇದಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸಭಾವತಿ ಅವರನ್ನು ಭೇಟಿಮಾಡಿ ದೂರು ನೀಡಲಾಗುವುದೆಂದು ತಿಳಿಸಿದರು.



Join Whatsapp