Home ಟಾಪ್ ಸುದ್ದಿಗಳು ನೋಟುಗಳ ಮೇಲೆ ಗಣೇಶ, ಲಕ್ಷ್ಮಿ ಫೋಟೋಗಳನ್ನು ಮುದ್ರಿಸಿ ಎಂಬ ಹೇಳಿಕೆ ಅಸಂಬದ್ಧ: ನಟ ಚೇತನ್ ಅಹಿಂಸಾ

ನೋಟುಗಳ ಮೇಲೆ ಗಣೇಶ, ಲಕ್ಷ್ಮಿ ಫೋಟೋಗಳನ್ನು ಮುದ್ರಿಸಿ ಎಂಬ ಹೇಳಿಕೆ ಅಸಂಬದ್ಧ: ನಟ ಚೇತನ್ ಅಹಿಂಸಾ

ಬೆಂಗಳೂರು: ಭಾರತೀಯ ಕರೆನ್ಸಿ ನೋಟುಗಳ ಮೇಲೆ ಲಕ್ಷ್ಮೀ ಮತ್ತು ಗಣೇಶನ ಚಿತ್ರ ಮುದ್ರಿಸಬೇಕು ಎಂಬ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಹೇಳಿಕೆಯನ್ನು ನಟ ಚೇತನ್ ಅಹಿಂಸಾ ಖಂಡಿಸಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನೋಟುಗಳ ಮೇಲೆ ಗಣೇಶ ಮತ್ತು ಲಕ್ಷ್ಮಿ ಫೋಟೋಗಳನ್ನು ಮುದ್ರಿಸಿ ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಆಗ್ರಹಿಸಿದ್ದಾರೆ. ಇದರಿಂದ ದೇಶದ ಆರ್ಥಿಕತೆ ಸುಧಾರಿಸುತ್ತದೆ ಎಂದು ಕೂಡ ವಾದಿಸಿದ್ದಾರೆ. ಇದು ಎಷ್ಟು ಅಸಂಬದ್ಧವಾದ ಹೇಳಿಕೆ ಎಂದು ಪ್ರಶ್ನಿಸಿದ್ದಾರೆ.


‘ಇಂತಹ ಅಸಾಂವಿಧಾನಿಕ, ಮೌಢ್ಯಗಳ ಹೇರಿಕೆಯನ್ನು ಕೇಜ್ರಿವಾಲ್ ಅವರು ನಿಲ್ಲಿಸಬೇಕು. ಕರ್ನಾಟಕದಲ್ಲಿ ಈಗಾಗಲೇ ಹಲವಾರು ಬ್ರಾಹ್ಮಣ್ಯದ ಪಕ್ಷಗಳಿವೆ. ಇನ್ನೊಂದರ ಅಗತ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.

Join Whatsapp
Exit mobile version