ಬ್ರಾಹ್ಮಣ್ಯದ ವಿರುದ್ಧ ಅವಹೇಳನಕಾರಿ ಪೋಸ್ಟ್ ವಿಚಾರ | ವಿಚಾರಣೆಗಾಗಿ ಬಸವನಗುಡಿ ಠಾಣೆಗೆ ಹಾಜರಾದ ನಟ ಚೇತನ್

Prasthutha|

ಬೆಂಗಳೂರು: ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಲಾದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣ ಸಂಬಂಧ ನಟ ಚೇತನ್ ಬಸವನಗುಡಿ ಠಾಣೆಗೆ ವಿಚಾರಣೆಗಾಗಿ ಹಾಜರಾಗಿದ್ದಾರೆ.

- Advertisement -

ನಿನ್ನೆಯಷ್ಟೇ ಪ್ರಕರಣ ಸಂಬಂಧ ಬಸವನಗುಡಿ ಠಾಣೆ ಪೊಲೀಸರಿಂದ ನೋಟೀಸ್ ಪಡೆದಿದ್ದ ಚೇತನ್ ಇಂದು ವಿಚಾರಣೆಗಾಗಿ ಠಾಣೆಗೆ ಹಾಜರಾಗಿದ್ದಾರೆ. ನಟ ಚೇತನ್ ಅವರು ಬ್ರಾಹ್ಮಣರ ವಿರುದ್ಧ ನೀಡಿರುವ ಹೇಳಿಕೆ ಸಂಬಂಧ ಪಿಎಸ್ಐ ನೇತೃತ್ವದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣದ ಪೋಸ್ಟ್ ವೊಂದರಲ್ಲಿ ಚೇತನ್ ಅವರು ತಮ್ಮ ಸಮುದಾಯದ ಬಗ್ಗೆ ಕೆಟ್ಟದ್ದಾಗಿ ಬಿಂಬಿಸಿ ಹೇಳಿಕೆ ನೀಡಿದ್ದಾಗಿ ಬ್ರಾಹ್ಮಣ ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ಎಂಬವರು ಬಸವನಗುಡಿ ಠಾಣೆಗೆ ದೂರು ದಾಖಲಿಸಿದ್ದರು. ಅದರಂತೆ ಕಲಂ ಕಲಂ 153B, 295A ಅಡಿ‌ ಪ್ರಕರಣ ದಾಖಲಿಸಲಾಗಿತ್ತು.

- Advertisement -

‘ಆ ದಿನಗಳು’ ಖ್ಯಾತಿಯ ನಟ ಚೇತನ್ ಅಹಿಂಸಾ ಅವರು ನೀಡಿದ್ದ ಬ್ರಾಹ್ಮಣ್ಯ ವಿರೋಧಿ ಹೇಳಿಕೆಯು ಪರ-ವಿರೋಧ ಚರ್ಚೆಗೂ ಕಾರಣವಾಗಿದೆ.

Join Whatsapp