ಚಾರ್ಜ್ ಶೀಟ್ ಮಾಹಿತಿ ಪ್ರಸಾರ ನಿರ್ಬಂಧ ಕೋರಿ ಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್

Prasthutha|

ಬೆಂಗಳೂರು: ನಟ ದರ್ಶನ್ ಅವರ ವಿರುದ್ಧ ಕೋರ್ಟ್ ಗೆ ಸಲ್ಲಿಕೆ ಆದ ಚಾರ್ಜ್ ಶೀಟ್ ನ ವಿಚಾರಗಳ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಿವೆ. ಈ ಹಿನ್ನೆಲೆ ದರ್ಶನ್ ಅವರು ಇದಕ್ಕೆ ನಿರ್ಬಂಧ ಕೋರಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

- Advertisement -


ದರ್ಶನ್ ಪರ ವಕೀಲರು ಈ ವಿಚಾರದಲ್ಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.


ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ 17 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. ಚಾರ್ಜ್ ಶೀಟ್ ನಲ್ಲಿ ದರ್ಶನ್ ಅವರು ಏನು ಮಾಡಿದ್ದರು ಎಂಬ ಬಗ್ಗೆ ಮಾಹಿತಿ ಇದೆ. ರೇಣುಕಾ ಸ್ವಾಮಿಗೆ ಕೊಟ್ಟ ಚಿತ್ರ ಹಿಂಸೆಗಳ ಬಗ್ಗೆ ಅಲ್ಲಿ ವಿವರಣೆ ನೀಡಲಾಗಿತ್ತು. ಇವುಗಳ ಪ್ರಸಾರದ ಮೇಲೆ ನಿರ್ಬಂಧ ಹೇರಿ ಎಂದು ದರ್ಶನ್ ಕೋರಿದ್ದಾರೆ.

- Advertisement -


ಸದ್ಯ ದರ್ಶನ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಚಾರ್ಜ್ ಶೀಟ್ ನಲ್ಲಿನ ಗೌಪ್ಯ ಮಾಹಿತಿ ಬಹಿರಂಗಪಡಿಸದಂತೆ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.



Join Whatsapp
Exit mobile version