Home ಟಾಪ್ ಸುದ್ದಿಗಳು ನಾಳೆ ಹೈಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ಭವಿಷ್ಯ

ನಾಳೆ ಹೈಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ಭವಿಷ್ಯ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲಿನಲ್ಲಿರುವ ನಟ ದರ್ಶನ್ ಜಾಮೀನು ಭವಿಷ್ಯ ನಾಳೆ ಸೋಮವಾರ ನಿರ್ಧಾರವಾಗಲಿದೆ.

ಹೈಕೋರ್ಟ್‌ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನಟ ದರ್ಶನ್‌ರ ಮೆಡಿಕಲ್ ರಿಪೋರ್ಟ್ ಸಲ್ಲಿಕೆ ಮಾಡುವಂತೆ ಬಳ್ಳಾರಿ ಜೈಲಾಧಿಕಾರಿಗಳಿಗೆ ಹೈಕೋರ್ಟ್ ಸೂಚಿಸಿತ್ತು.

ಹೀಗಾಗಿ ಜೈಲಾಧಿಕಾರಿಗಳು ನಾಳೆ ಹೈಕೋರ್ಟ್‌ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಕೆ‌‌ ಮಾಡಲಿದ್ದಾರೆ.

ವೈದ್ಯಾಧಿಕಾರಿಗಳು ಈಗಾಗಲೇ ನಟ ದರ್ಶನ್‌ಗೆ ಎಂಆರ್‌ಐ (MRI) ಸ್ಕ್ಯಾನ್ ಮಾಡಿದ್ದಾರೆ. ಸ್ಕ್ಯಾನಿಂಗ್ ವೇಳೆ ಬೆನ್ನುನೋವು ಇರುವುದರ ಬಗ್ಗೆ ಉಲ್ಲೇಖಿಸಿದ್ದಾರೆ. ಮತ್ತೊಂದು ಕಡೆ ಮೆಡಿಕಲ್ ರಿಪೋರ್ಟ್ ಇಟ್ಟುಕೊಂಡೇ ನಟ ದರ್ಶನ್‌ ಪರ ವಕೀಲರು ಜಾಮೀನು ಕೋರಿ ವಾದ ಮಂಡಿಸಲಿದ್ದಾರೆ. ದರ್ಶನ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಲಿದ್ದಾರೆ.

Join Whatsapp
Exit mobile version