Home ಟಾಪ್ ಸುದ್ದಿಗಳು ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ: ಹೈಕೋರ್ಟ್ ಮೆಟ್ಟಿಲೇರಿದ ನಟ ಗಣೇಶ್

ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ: ಹೈಕೋರ್ಟ್ ಮೆಟ್ಟಿಲೇರಿದ ನಟ ಗಣೇಶ್

ಬೆಂಗಳೂರು: ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಕ್ಕೆ ಸಿಲುಕಿರುವ ನಟ ಗಣೇಶ್ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.


ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಅರಣ್ಯ ಇಲಾಖೆ ನೀಡಿರುವ ನೋಟೀಸ್ ಗೆ ತಡೆಯಾಜ್ಞೆ ನೀಡುವಂತೆ ಗಣೇಶ್ ಮನವಿ ಮಾಡಿದ್ದಾರೆ.


ಗುಂಡ್ಲುಪೇಟೆ ತಾಲ್ಲೂಕಿನ ಹಂಗಾಳ ಹೋಬಳಿಯ ಜಕ್ಕಳ್ಳಿ ಗ್ರಾಮದಲ್ಲಿ ಗಣೇಶ್ ಅವರು ಕಟ್ಟಡ ನಿರ್ಮಿಸುತ್ತಿದ್ದಾರೆ. ಪರಿಸರ ಸೂಕ್ಷ್ಮ ವಲಯದಲ್ಲಿ ಶಾಶ್ವತ ಕಟ್ಟಡ ನಿರ್ಮಿಸಬಾರದು. ಹೀಗಾಗಿ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಅರಣ್ಯ ಇಲಾಖೆಯು ಗಣೇಶ್ ಅವರಿಗೆ ನೋಟೀಸ್ ನೀಡಿತ್ತು. ಇದನ್ನು ಪ್ರಶ್ನಿಸಿ ಗಣೇಶ್ ಪರ ಹಿರಿಯ ವಕೀಲ ಸಿ.ಕೆ. ನಂದಕುಮಾರ್ ಅವರು ಹೈಕೋರ್ಟ್ ನಲ್ಲಿ ವಾದ ಮಂಡಿಸಿದ್ದಾರೆ.

Join Whatsapp
Exit mobile version