ರಾಜ್ಯಾದ್ಯಂತ ನಟ ಪುನೀತ್ ರಾಜ್ ಕುಮಾರ್ ಜನ್ಮದಿನಾಚರಣೆ

Prasthutha|

ಬೆಂಗಳೂರು: ಕಳೆದ ವರ್ಷ ನಿಧನರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರ 47ನೇ ಜನ್ಮ ದಿನಾಚರಣೆಯನ್ನು ರಾಜ್ಯಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

- Advertisement -

ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ’ಜೇಮ್ಸ್’ ಕೂಡಾ ಇಂದು ಬಿಡುಗಡೆಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಪುನೀತ್ ರಾಜ್ ಕುಮಾರ್ ಅವರನ್ನು ಸ್ಮರಿಸಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರಿಗೆ ಟ್ವೀಟ್ ಮೂಲಕ ನಮನ ಸಲ್ಲಿಸಿರುವ ಮುಖ್ಯಮಂತ್ರಿ, ಅತಿ ಚಿಕ್ಕ ವಯಸ್ಸಿನಲ್ಲಿ ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಜನಸೇವೆಯನ್ನು ಬಣ್ಣಿಸಲು ಪದಗಳೇ ಸಾಲದು ಎಂದಿದ್ದಾರೆ.

- Advertisement -

ಪುನೀತ್ ರಾಜ್ ಕುಮಾರ್ ನಮ್ಮಿಂದ ಕಣ್ಮರೆಯಾಗಿದ್ದರೂ ಸರಳ, ಸಜ್ಜನಿಕೆ, ಪ್ರೀತಿ, ಆತ್ಮವಿಶ್ವಾಸದಿಂದ ಕೂಡಿದ್ದ ಅವರ ಪ್ರತಿಭಾಶಾಲಿ ವ್ಯಕ್ತಿತ್ವ ಪ್ರೇರಕಶಕ್ತಿಯಾಗಿ ಕೋಟ್ಯಂತರ ಜನರ ಹೃದಯದಲ್ಲಿ ಅಜರಾಮರಾಗಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Join Whatsapp