ನಟಿ ಕಂಗನಾ ರಣಾವತ್ ಕಾರಿಗೆ ರೈತರಿಂದ ಮುತ್ತಿಗೆ

Prasthutha|

ಚಂಡೀಗಢ: ವಿವಾದಾತ್ಮಕ ಕೃಷಿ ಕಾನೂನಿನ ವಿರುದ್ಧ ಪ್ರತಿಭಟಿಸುವವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದ ನಟಿ ಕಂಗನಾ ರಣಾವತ್ ಕಾರಿಗೆ ರೈತರು ಮುತ್ತಿಗೆ ಹಾಕಿದ ಘಟನೆ ಚಂಡೀಗಢ-ಉನಾ ಹೆದ್ದಾರಿಯಲ್ಲಿರುವ ಕಿರಾತ್ ಪುರ ಸಾಹಿಬ್ ನ ಬುಂಗಾ ಸಾಹಿಬ್‌ ನಲ್ಲಿ ನಡೆದಿದೆ.

- Advertisement -

ಈ ಕುರಿತು ಪ್ರತಿಕ್ರಿಯಿಸಿದ ನಟಿ, ತನ್ನ ಕಾರನ್ನು ಪಂಜಾಬ್ ನ ಕಿರಾತ್ ಪುರದಲ್ಲಿ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ ರೈತರು ಮುತ್ತಿಗೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಕಂಗನಾ ರಣಾವತ್ ಕಾರಿನ ಮೇಲೆ ನಡೆದಿರುವ ದಾಳಿಯ ಬಗ್ಗೆ ತನಗೆ ಯಾವುದೇ ಮಾಹಿತಿ ಇಲ್ಲ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ. “ನನಗೆ ಯಾವುದೇ ಮಾಹಿತಿ ಇಲ್ಲ, ಘಟನೆಯ ವಿವರಗಳನ್ನು ಪಡೆದ ನಂತರವೇ ಪ್ರತಿಕ್ರಿಯೆ ನೀಡುತ್ತೇನೆ” ಎಂದು ಅವರು ಹೇಳಿದರು.

Join Whatsapp