ದರ್ಶನ್‌ ಭೇಟಿಯಾಗಿ ಮಾತುಕತೆ ನಡೆಸಿದ ನಟಿ ರಕ್ಷಿತಾ, ಪ್ರೇಮ್ ದಂಪತಿ

Prasthutha|

ಬೆಂಗಳೂರು: ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಪರ ಕೆಲವರಿಂದ ಬೆಂಬಲ, ಅವರ ಖೈದಿ ನಂಬರನ್ನು ಟ್ರೆಂಡ್ ಮಾಡುವಿಕೆ ನಡೆಯುತ್ತಿದ್ದು, ಕೆಲ ಆಪ್ತರು ಭೇಟಿಯೂ ಮಾಡುತ್ತಿದ್ದಾರೆ. ನಟಿ ರಕ್ಷಿತಾ, ಪ್ರೇಮ್ ದಂಪತಿ ದರ್ಶನ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

- Advertisement -

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರಕ್ಷಿತಾ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಪ್ರಕರಣ ನ್ಯಾಯಾಲಯದಲ್ಲಿದ್ದು, ಇದರ ಬಗ್ಗೆ ಏನು ಮಾತಾನಾಡುವುದಿಲ್ಲ. ರೇಣುಕಾ ಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದ್ದಾರೆ. ದರ್ಶನ್ ಆರಾಮಾಗಿದ್ದಾರಾ ಎಂಬ ಮಾಧ್ಯಮಗಲದವರ ಪ್ರಶ್ನೆಗೆ, ಇಂತಹ ಪರಿಸ್ಥಿತಿಯಲ್ಲಿ ಯಾರಾದರೂ ಆರಾಮಾಗಿ ಇರುತ್ತಾರಾ ಎಂದು ಭಾವುಕರಾಗಿ ಪ್ರಶ್ನಿಸಿದರು.

ನಿರ್ದೇಶಕ ಜೋಗಿ ಪ್ರೇಮ್‌ ಮಾತನಾಡಿ, ಪ್ರಕರಣ ನ್ಯಾಯಾಲಯದಲ್ಲಿರುವ ಕಾರಣ ನಾವು ಈ ಸಂದರ್ಭದಲ್ಲಿ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಪತ್ನಿಯ ಹೇಳಿಕೆಯನ್ನೇ ಹೇಳಿದರು. ಜೈಲಿನಲ್ಲಿ ದರ್ಶನ್ ಜತೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದರು.

Join Whatsapp