ಅಡ್ಯಾರ್ ಪದವು: ಆಟೋ ರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣ: ನಾಲ್ವರು ಪೊಲೀಸ್ ವಶಕ್ಕೆ

Prasthutha|

ಮಂಗಳೂರು: ನಗರದ ಹೊರವಲಯದ ಅಡ್ಯಾರ್ ಪದವಿನಲ್ಲಿ ಆಟೋ ರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ಈ ಕುರಿತು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಶಶಿಕುಮಾರ್, ಹಲ್ಲೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಮಹಿಳೆ ಧರಿಸುವ ಚಪ್ಪಲಿ ಸ್ಥಳದಲ್ಲಿ ಪತ್ತೆಯಾಗಿತ್ತು. ಹಲ್ಲೆಗೊಳಗಾದ ವ್ಯಕ್ತಿ ಹಿನ್ನೆಲೆ ಪರಿಶೀಲನೆ ನಡೆಸುತ್ತಿದ್ದೇವೆ. ಆದರೆ ಗಾಯಾಳು ಹೇಳಿಕೆ ಇದುವರೆಗೂ ನೀಡಿಲ್ಲ ಎಂದು ತಿಳಿಸಿದರು.

ನಿನ್ನೆ ತಡರಾತ್ರಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ರಿಯಾಝ್ (38) ಮೇಲೆ ಬಿಯರ್ ಬಾಟಲಿ, ರಾಡ್ ನಿಂದ ಹಲ್ಲೆ ನಡೆದಿತ್ತು.

- Advertisement -

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News

Join Whatsapp