Home ಟಾಪ್ ಸುದ್ದಿಗಳು ಅಫ್ಘಾನ್ ಮುಸ್ಲಿಮರಿಗೆ ಭಾರತದಲ್ಲಿ ಆಶ್ರಯ ನೀಡಬಾರದು: ಪ್ರವೀಣ್ ತೊಗಾಡಿಯಾ

ಅಫ್ಘಾನ್ ಮುಸ್ಲಿಮರಿಗೆ ಭಾರತದಲ್ಲಿ ಆಶ್ರಯ ನೀಡಬಾರದು: ಪ್ರವೀಣ್ ತೊಗಾಡಿಯಾ

ನಾಗ್ಪುರ: ಅಫ್ಘಾನಿಸ್ತಾನದಿಂದ ಬರುವ ಮುಸ್ಲಿಂ ಪ್ರಜೆಗಳಿಗೆ ಭಾರತದಲ್ಲಿ ಆಶ್ರಯ ನೀಡಬಾರದು ಎಂದು ರಾಷ್ಟ್ರೀಯ ಹಿಂದೂ ಪರಿಷತ್ ನ ಮುಖ್ಯಸ್ಥ ಪ್ರವೀಣ್ ತೊಗಾಡಿಯಾ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಆದರೆ ಅಲ್ಲಿಂದ ಬರುವ ಹಿಂದೂ ಮತ್ತು ಸಿಖ್ ನಿರಾಶ್ರಿತರಿಗೆ ಭಾರತದ ಗಡಿಯನ್ನು ತೆರೆದಿರಿಸಬೇಕು ಎಂದು ಹೇಳಿದ್ದಾರೆ.
‘ಭಾರತವು ತಾಲಿಬಾನ್ ಉದ್ದೇಶದ ಕೇಂದ್ರಬಿಂದುವಾಗಿರುವುದರಿಂದ ದೇಶವು ಬಹಳ ದೊಡ್ಡ ಅಪಾಯ ಎದುರಿಸುತ್ತಿದೆ. ಆದ್ದರಿಂದ ದೇಶವು ತಾಲಿಬಾನೀಕರಣ ಆಗುವುದನ್ನು ತಡೆಯಬೇಕಿದೆ’ ಎಂದು ಹೇಳಿದ್ದಾರೆ.

Join Whatsapp
Exit mobile version