ಕಾಂಗ್ರೆಸ್ ನಲ್ಲಿ ರಾಜೀನಾಮೆ ಪರ್ವ: ಗುಲಾಂ ನಬಿ ಆಝಾದ್ ಬೆನ್ನಲ್ಲೇ ಮಾಜಿ ಸಚಿವ ಸೇರಿ ಐವರ ರಾಜೀನಾಮೆ

Prasthutha|

ಶ್ರೀನಗರ: ಕಾಂಗ್ರೆಸಿನ ಪ್ರಭಾವಿ ನಾಯಕ ಗುಲಾಂ ನಬಿ ಆಝಾದ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಬೆನ್ನಿಗೇ ಜಮ್ಮು- ಕಾಶ್ಮೀರದಲ್ಲಿ ಹಲವು ಕಾಂಗ್ರೆಸ್ ನಾಯಕರ ರಾಜೀನಾಮೆ ಪರ್ವ ಆರಂಭವಾಗಿದೆ. ಮಾಜಿ ಸಚಿವ ಆರ್ ಎಸ್ ಚಿಬ್ ಸೇರಿ 5 ಕಾಂಗ್ರೆಸ್ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

ಗುಲಾಂ ನಬಿ ಆಝಾದ್ ರಾಜೀನಾಮೆ ಪತ್ರದಲ್ಲಿ ತಮ್ಮ ರಾಜೀನಾಮೆಗೆ ರಾಹುಲ್ ಗಾಂಧಿಯೇ ಕಾರಣ ಎಂದು ಉಲ್ಲೇಖಿಸಿದ್ದರು.  ರಾಹುಲ್ ಗಾಂಧಿಯವರನ್ನು ಕಟುವಾಗಿ ಟೀಕಿಸಿಯೇ ಇಂದು ಕಾಂಗ್ರೆಸ್ ತೊರೆದಿರುವ ಗುಲಾಂ ನಬಿ ಆಝಾದ್ ಜಮ್ಮು ಕಾಶ್ಮೀರದಲ್ಲಿ ಹೊಸ ಪಕ್ಷವನ್ನು ಪ್ರಾರಂಭಿಸುವ ಸೂಚನೆ ನೀಡಿದ್ದಾರೆ. ಇದರ ಬೆನ್ನಿಗೇ ಅವರ ತವರು ನೆಲದಲ್ಲಿ ಹಲವು ನಾಯಕರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದು, ಕಾಂಗ್ರೆಸ್ ಭಾರಿ ಹೊಡೆತವಾಗಿದೆ.

Join Whatsapp