ಕರ್ನಾಟಕದಾದ್ಯಂತ ಶಾಲಾ ತರಗತಿಗಳಲ್ಲಿ ಭಗವದ್ಗೀತೆ ಬೋಧನೆಗೆ ಚಿಂತನೆ: ಸಚಿವ ನಾಗೇಶ್

Prasthutha|

ಬೆಂಗಳೂರು: ಕರ್ನಾಟಕದಾದ್ಯಂತ ಶಾಲಾ ತರಗತಿಗಳಲ್ಲಿ ಪಾಠ್ಯದ ಜೊತೆ ಭಗವದ್ಗೀತೆಯನ್ನು ಬೋಧಿಸುವ ಬಗ್ಗೆ ಆದೇಶ ಹೊರಡಿಸಲು ಚಿಂತನೆ ನಡೆಸಿದೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

- Advertisement -

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರ ಈ ಆದೇಶ ಹೊರಡಿಸದಲ್ಲಿ ಎಲ್ಲಾ ಶಾಲೆಗಳ ಪಾಠ್ಯದ ಜೊತೆಗೆ ಭಗವದ್ಗೀತೆ ಬೋಧನೆಯನ್ನು ಕಡ್ಡಾಯಗೊಳಿಸಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದಾದ್ಯಂತ ಶಾಲಾ ತರಗತಿಗಳಲ್ಲಿ ಪಠ್ಯಕ್ರಮದ ಜತೆಗೆ ಭಗವದ್ಗೀತೆಯನ್ನು ಬೋಧಿಸುವ ಕುರಿತು ಆದೇಶ ಹೊರಡಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.

- Advertisement -

ಮಾತ್ರವಲ್ಲ ಪ್ರಸಕ್ತ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಪಠ್ಯ ಪುಸ್ತಕಗಳ ಸಮಿತಿ ಮತ್ತು ಶಿಕ್ಷಣ ತಜ್ಞರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.

ಈ ಪ್ರಸ್ತಾವನೆಯು ಆರಂಭಿಕ ಹಂತದಲ್ಲಿದೆ ಮತ್ತು 20222 – 23ನೇ ಶೈಕ್ಷಣಿಕ ಸಾಲಿನಲ್ಲಿ ಅನುಷ್ಠಾನಕ್ಕೆ ತರುವುದಿಲ್ಲ ಎಂದು ಸಚಿವ ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ಈ ಮಧ್ಯೆ ಗುಜರಾತ್ ನಲ್ಲಿ 2022 0 23 ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ 6 ರಿಂದ 12ನೇ ತರಗತಿವರೆಗೆ ಭಗವದ್ಗೀತೆಯನ್ನು ಪಠ್ಯದ ಜೊತೆ ಬೋಧಿಸಲಾಗುವುದೆಂದು ಸರ್ಕಾರ ಘೋಷಿಸಿತ್ತು.

Join Whatsapp