ಮುಡಾ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

Prasthutha|

ಬೆಂಗಳೂರು: ಮುಡಾ ಪ್ರಕರಣದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

- Advertisement -


ಅರ್ಕಾವತಿ ಲೇಔಟ್ ನಿವೇಶನದಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.


ಅರ್ಕಾವತಿ ಲೇಔಟ್ ನಲ್ಲಿ ನಿವೇಶನ ಪಡೆದಿದ್ದ ಶಿವಲಿಂಗಪ್ಪ, ವೆಂಕಟಕೃಷ್ಣಪ್ಪ, ರಾಮಚಂದ್ರಯ್ಯ ರಾಜಶೇಖರ್ ಎಂಬುವರು ಸಿಎಂ ಸಿದ್ದರಾಮಯ್ಯ, ಬಿಡಿಎ ಆಯುಕ್ತ ಹಾಗೂ ಬಿಡಿಎ ಅಧಿಕಾರಿಗಳು “ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಅರ್ಕಾವತಿ ಲೇಔಟ್ ನಲ್ಲಿ ಹಂಚಿಕೆಯಾಗಿದ್ದ ನಿವೇಶನ ಭೂಗಳ್ಳರ ಪಾಲಾಗುತ್ತಿದೆ. ಅಧಿಕಾರ ದುರ್ಬಳಕೆಯಿಂದ ನಿವೇಶನದಾರರಿಗೆ ತೊಂದರೆಯಾಗುತ್ತಿದೆ” ಎಂದು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.



Join Whatsapp