ಯಡಿಯೂರಪ್ಪ ಬಳಿಕ ಮತ್ತೊಬ್ಬ ಬಿಜೆಪಿ ನಾಯಕನಿಂದ ರಾಜಕೀಯ ನಿವೃತ್ತಿ ಘೋಷಣೆ!

Prasthutha|

ತುಮಕೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿನ್ನೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದು, ತನ್ನ ಕ್ಷೇತ್ರವನ್ನು ಮಗ ವಿಜಯೇಂದ್ರಗೆ ಬಿಟ್ಟುಕೊಡುವುದಾಗಿ ಘೋಷಿಸಿದ್ದರು.

- Advertisement -


ಈ ಬೆನ್ನಲ್ಲೇ ಮುಂದಿನ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ತುಮಕೂರು ಬಿಜೆಪಿ ಸಂಸದ ಜಿ.ಎಸ್. ಬಸವರಾಜ್ ಘೋಷಿಸಿದ್ದಾರೆ.

ನನಗೆ 84 ವರ್ಷ ವಯಸ್ಸಾಗಿದ್ದು, ವಯಸ್ಸಿನ ಲೆಕ್ಕಾಚಾರದಲ್ಲಿಯೂ ಟಿಕೆಟ್ ನೀಡಲ್ಲ ಎಂದು ಬಿಜೆಪಿ ನಿರ್ಧರಿಸಿದೆ. ಹಾಗಾಗಿ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಅವರು ಹೇಳಿದ್ದಾರೆ.

- Advertisement -

ತುಮಕೂರು ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ದೇವೇಗೌಡರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದು, ಒಂದು ವೇಳೆ ಅವರು ಸ್ಪರ್ಧಿಸಿದರೆ ನಾನು ಮತ್ತೆ ಸ್ಪರ್ಧಿಸುತ್ತೇನೆ. ಪಕ್ಷದಿಂದ ಟಿಕೆಟ್ ಕೊಡದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಯಡಿಯೂರಪ್ಪ ರಾಜಕೀಯ ನಿವೃತ್ತಿ ಘೋಷಿಸಿಲ್ಲ, ರಾಜಕೀಯದಲ್ಲಿ ಸಕ್ರಿಯವಾಗಿರುತ್ತಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದರು.

Join Whatsapp