ರಾಜ್ಯದಲ್ಲಿ ಮತಾಂತರ ವಿರುದ್ಧ ಬೀದಿಗಿಳಿದು ಹೋರಾಟ: ಸದಾನಂದ ಗೌಡ

Prasthutha|

ಬೆಂಗಳೂರು: ಮತಾಂತರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ತಿಳಿಸಿದರು.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ತಡೆಗೆ ಎಲ್ಲಾ ರೀತಿಯಲ್ಲಿಯೂ ಹೋರಾಟಗಳನ್ನು ರೂಪಿಸಲಾಗುವುದು. ಯಾರೂ ಸಹ ಮತಾಂತರ ಆಗಬಾರದು. ಮತಾಂತರದ ವಿರುದ್ಧ ಧ್ವನಿ ಎತ್ತಲಾಗುವುದು ಎಂದು ತಿಳಿಸಿದ್ದಾರೆ.


ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾಂಗ್ರೆಸ್ ನವರೇ ಮೂಲ ಕಾರಣ. ಕಾಂಗ್ರೆಸ್ ಈಗಾಗಲೇ ಮುಳುಗಿದ ಹಡಗು ಆಗಿದೆ. ರೈತರ ಪ್ರತಿಭಟನೆ ಪರಿಹಾರವಲ್ಲ. ಪ್ರಧಾನಿ ಮೋದಿ ಸಾಕಷ್ಟು ಸುತ್ತಿನ ಮಾತುಕತೆಯನ್ನು ಮಾಡಿದ್ದಾರೆ. ರೈತರ ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂದು ಹೇಳಿದ್ದಾರೆ.

Join Whatsapp