ಅಗ್ನಿಪಥ್ ಹಿಂಸಾಚಾರದ ಹಿಂದೆ ಕೃಷಿ ಕಾಯ್ದೆ ವಿರೋಧಿಸಿದವರೇ ಇದ್ದಾರೆ: ಶೋಭಾ ಕರಂದ್ಲಾಜೆ ಆರೋಪ

Prasthutha|

ಉಡುಪಿ: ಅಗ್ನಿಪಥ್‌ ಯೋಜನೆ ವಿರೋಧಿಸಿ ಹಿಂಸಾಚಾರ ನಡೆಯುತ್ತಿರುವುದು ಗಮನಿಸಿದರೆ ಇದರ ಹಿಂದೆ ಕೃಷಿ ಮಸೂದೆ ವಿರುದ್ಧ ಹೋರಾಡಿದವರ ಷಡ್ಯಂತ್ರ ಎದ್ದು ಕಾಣುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

- Advertisement -

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಹಿಂಸಾಚಾರ ನಡೆಸಿ ರೈಲು ಸುಟ್ಟು ಹಾಕಿದವರು ಯಾರು ಕೂಡ ಸೈನ್ಯ ಸೇರುವವರಲ್ಲ. ಸೈನ್ಯ ಸೇರದವರು ಮತ್ತು ದೇಶಭಕ್ತಿ ಬಗ್ಗೆ ಮಾತನಾಡದವರು ಈ ಹಿಂಸಾಚಾರ ನಡೆಸುತ್ತಿದ್ದಾರೆ.


ಇದೊಂದು ವ್ಯವಸ್ಥಿತ ಷಡ್ಯಂತ್ರ ಅನ್ನೋದು ಸ್ಪಷ್ಟ .ಈ ಎಲ್ಲಾ ಹಿಂಸಾತ್ಮಕ ಘಟನೆಗಳ ಹಿಂದೆ ಕೃಷಿ ಕಾಯ್ದೆ ವಿರೋಧಿಗಳೇ ಇದ್ದಾರೆ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

Join Whatsapp