Home ಟಾಪ್ ಸುದ್ದಿಗಳು ಚುನಾವಣಾ ಪ್ರಚಾರದ ವೇಳೆ ಎಐಎಡಿಎಂಕೆ ನಾಯಕ ಮುಹಮ್ಮದ್ ಜಾನ್ ಹೃದಯಾಘಾತದಿಂದ ನಿಧನ

ಚುನಾವಣಾ ಪ್ರಚಾರದ ವೇಳೆ ಎಐಎಡಿಎಂಕೆ ನಾಯಕ ಮುಹಮ್ಮದ್ ಜಾನ್ ಹೃದಯಾಘಾತದಿಂದ ನಿಧನ

ಚೆನ್ನೈ : ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಅಣ್ಣಾಡಿಎಂಕೆ ರಾಜ್ಯಸಭಾ ಸದಸ್ಯ ಎ. ಮುಹಮ್ಮದ್ ಜಾನ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

72 ವರ್ಷದ ಅವರು ವೆಲ್ಲೂರು ಜಿಲ್ಲೆಯ ರಾನ್ನಿಪೇಟ ವಾಲಾಜಾ ಸಮೀಪ ಚುನಾವಣಾ ಪ್ರಚಾರ ನಡೆಸುತ್ತಿದ್ದಾಗ ತೀವ್ರ ಎದೆನೋವು ಕಾಣಿಸಿಕೊಂಡಾಗ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

2011ರಲ್ಲಿ ರಾನ್ನಿಪೇಟ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಜಯಲಲಿತಾ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರಾಗಿದ್ದರು. ನಂತರ ತಮಿಳುನಾಡಿನ ವಕ್ಫ್ ಮಂಡಳಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.  

Join Whatsapp
Exit mobile version