ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಚಿವ ಸ್ಥಾನದಿಂದ ವಜಾಕ್ಕೆ ಎಐಸಿಸಿ ಸೂಚನೆ: ಸಿಎಂ ಸಿದ್ದರಾಮಯ್ಯ

Prasthutha|

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸಚಿವ ಸುರ್ಜೆವಾಲಾ ಅವರಿಗೆ ಎಐಸಿಸಿ ಅಧ್ಯಕ್ಷರು ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ. ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಚಿವ ಸ್ಥಾನದಿಂದ ವಜಾ ಮಾಡುವಂತೆ ಹೇಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

- Advertisement -

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಂದು ನಡೆದ ಕ್ಯಾಬಿನೆಟ್‌ ಸಭೆಯಲ್ಲಿ ಮಾತನಾಡಿದ ಅವರು, ಸಚಿವರಿಗೆ ಎಚ್ಚರಿಕೆ ಕೊಟ್ಟರು. ನನ್ನ ಮತ್ತು ಶಿವಕುಮಾರ್‌ ಇಬ್ಬರೊಟ್ಟಿಗೂ ಕೆ.ಸಿ ವೇಣುಗೋಪಾಲ್ ಮಾತನಾಡಿದ್ದಾರೆ. ನೀವ್ಯಾರು ಇನ್ನುಮುಂದೆ ಸಭೆ ಸೇರುವುದು, ಮಾತನಾಡುವುದು, ಮಾಡಬಾರದು. ಮುಂದೆ ಅಂತಹ ಪರಿಸ್ಥಿತಿ ನಿರ್ಮಾಣವಾದರೆ ನೀವೆ ಜವಾಬ್ದಾರರು ಎಂದಿದ್ದಾರೆ.

ಎಐಸಿಸಿ ಅಧ್ಯಕ್ಷರು ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಅವರಿಗೆ ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ. ಯಾವ ಸಚಿವರು ಸಭೆ ಮಾಡ್ತಾರೆ? ಬಹಿರಂಗವಾಗಿ ಮಾತಾಡ್ತಾರೆ ಅವರಿಗೆ ಎಐಸಿಸಿಯಿಂದ ನೀವೆ ನೋಟಿಸ್ ನೀಡಿ. ಪಕ್ಷದ ಶಿಸ್ತು ಉಲ್ಲಂಘಿಸಿದ್ದು ಸಾಬೀತಾದರೆ ಸಚಿವ ಸ್ಥಾನದಿಂದ ವಜಾ ಮಾಡಿ. ಇವಿಷ್ಟು ನಿರ್ದೇಶನವು ಎಐಸಿಸಿ ಅಧ್ಯಕ್ಷರಿಂದ ರಾಜ್ಯ ಕಾಂಗ್ರೆಸ್ ಉಸ್ತುವಾರಿಗೆ ಬಂದಿದೆ.

- Advertisement -

ಇದನ್ನ ಕೆ.ಸಿ ವೇಣುಗೋಪಾಲ್‌ ಹಾಗೂ ಸುರ್ಜೆವಾಲ ಇಬ್ಬರೂ ನನ್ನ ಗಮನಕ್ಕೆ ತಂದಿದ್ದಾರೆ. ನಿಮ್ಮ ಸಭೆ, ನಿಮ್ಮ ಮಾತು, ನಿಮ್ಮ ಜವಬ್ದಾರಿ. ಈ ವಿಚಾರದಲ್ಲಿ ಯಾವುದೂ ನನ್ನ ಕೈಯಲ್ಲಿ ಇಲ್ಲ ಎಂದು ನೇರವಾಗಿ ಸಿಎಂ ಹೇಳಿದ್ದಾರೆ



Join Whatsapp