ವಾಯು ಸೇನೆ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

Prasthutha|

ಬೆಂಗಳೂರು: ವಾಯುಸೇನೆ ತರಬೇತಿಗೆ ಬಂದಿದ್ದ ದೆಹಲಿ ಮೂಲದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಗಂಗಮ್ಮನಗುಡಿಯ ಏರ್ ಫೋರ್ಸ್ ಟೆಕ್ನಿಕಲ್ ಕಾಲೇಜು ಕ್ಯಾಂಪಸ್ನಲ್ಲಿ ನಡೆದಿದೆ. ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

- Advertisement -

ದೆಹಲಿ ಮೂಲದ ಅಂಕಿತ್ ಕುಮಾರ್ (27) ಮೃತ ವಿದ್ಯಾರ್ಥಿಯಾಗಿದ್ದು, ಮೃತರ ಕುಟುಂಬಸ್ಥರು ಅಧಿಕಾರಿಗಳ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ.

ಕೆಲ ವರ್ಷಗಳ ಹಿಂದೆ ವಾಯು ಸೇನೆ ತರಬೇತಿ ಸಲುವಾಗಿ ನಗರಕ್ಕೆ ಬಂದಿದ್ದ ಅಂಕಿತ್, ಜಾಲಹಳ್ಳಿಯ ಏರ್ ಫೋರ್ಸ್ ಟೆಕ್ನಿಕಲ್ ಕಾಲೇಜಿನಲ್ಲಿ ತರಬೇತಿ ಪಡೆಯುತ್ತಿದ್ದ.

- Advertisement -

ಅಂಕಿತ್ ನನ್ನು ತರಬೇತಿಯಿಂದ ಅಧಿಕಾರಿಗಳು ಅಮಾನತು ಮಾಡಿದ್ದರು ಎನ್ನಲಾಗಿದೆ. ಇದರಿಂದ ನೊಂದ ಯುವಕ, ಕಳೆದ ಸೆ. 21ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಎಎಫ್ ಟಿಸಿ ಅಧಿಕಾರಿಗಳ ವಿರುದ್ಧ ಕುಟುಂಬಸ್ಥರು ಕೊಲೆ ಆರೋಪ ಮಾಡಿದ್ದಾರೆ. ಇದರ ಅನ್ವಯ ಗಂಗಮ್ಮನಗುಡಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ

Join Whatsapp