Home ಟಾಪ್ ಸುದ್ದಿಗಳು ಏರ್ ಇಂಡಿಯಾ ಗಗನಸಖಿ ಕೊಲೆ ಪ್ರಕರಣದ ಆರೋಪಿ ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆ

ಏರ್ ಇಂಡಿಯಾ ಗಗನಸಖಿ ಕೊಲೆ ಪ್ರಕರಣದ ಆರೋಪಿ ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆ

ಮುಂಬೈ: ಗಗನಸಖಿ ಒಬ್ಬರನ್ನು ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯೊಬ್ಬ ಅಂಧೇರಿಯ ಪೊಲೀಸ್ ಠಾಣೆಯಲ್ಲಿ ತನ್ನ ಪ್ಯಾಂಟ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ಮುಂಬೈನ ಮರೋಲ್ ಪ್ರದೇಶದಲ್ಲಿ ವಾಸಿಸುತ್ತಿದ್ದ 23 ವರ್ಷದ ಗಗನಸಖಿಯನ್ನು ಕೊಂದ ಆರೋಪದಲ್ಲಿ ವಿಕ್ರಂ ಅತ್ವಾಲ್ ನನ್ನು ಪೊಲೀಸರು ಬಂಧಿಸಿದ್ದರು. ಆರೋಪಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.


ಗಗನಸಖಿ ರೂಪಲ್ ಒಗ್ರೆ ಅಂಧೇರಿಯ ಅಪಾರ್ಟ್ಮೆಂಟ್ ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಛತ್ತೀಸ್ ಗಢ ಮೂಲದ ಅವರು ವಿಮಾನಯಾನ ಸಂಸ್ಥೆಯಲ್ಲಿ ತರಬೇತಿಗಾಗಿ ಏಪ್ರಿಲ್ ನಲ್ಲಿ ಮುಂಬೈಗೆ ಬಂದಿದ್ದರು.


ಕೊಲೆ ಆರೋಪದ ಮೇಲೆ ರೂಪಾಲ್ ಉಳಿದುಕೊಂಡಿದ್ದ ಅಪಾರ್ಟ್ಮೆಂಟ್ ನ ಸ್ವಚ್ಚತಾ ಕೆಲಸಗಾರ 40 ವರ್ಷದ ವಿಕ್ರಮ್ ಅತ್ವಾಲ್ ಎಂಬುವವನ್ನು ಪೊಲೀಸರು ಬಂಧಿಸಿದ್ದರು. ಆದರೆ ಶುಕ್ರವಾರ ಆತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Join Whatsapp
Exit mobile version