Home ಟಾಪ್ ಸುದ್ದಿಗಳು ಜಮ್ಮುವಿನ ದೇವಸ್ಥಾನ ಧ್ವಂಸಗೊಳಿಸಿದ್ದ ಪ್ರಮುಖ ಆರೋಪಿ ಅರ್ಜುನ್ ಶರ್ಮಾ ಬಂಧನ

ಜಮ್ಮುವಿನ ದೇವಸ್ಥಾನ ಧ್ವಂಸಗೊಳಿಸಿದ್ದ ಪ್ರಮುಖ ಆರೋಪಿ ಅರ್ಜುನ್ ಶರ್ಮಾ ಬಂಧನ

ಶ್ರೀನಗರ: ಜಮ್ಮುವಿನಲ್ಲಿ ದೇವಾಲಯವೊಂದನ್ನು ಧ್ವಂಸಗೊಳಿಸಿದ್ದ ಅರ್ಜುನ್ ಶರ್ಮಾ ಎಂಬಾತನನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.

ನಾವು ಪ್ರಮುಖ ಆರೋಪಿ ಅರ್ಜುನ್ ಶರ್ಮಾನನ್ನು ಬಂಧಿಸಿದ್ದೇವೆ. ಅವನು ದೇವಾಲಯವನ್ನು ಧ್ವಂಸ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಜಮ್ಮು (ಗ್ರಾಮೀಣ) ಪೊಲೀಸ್ ವರಿಷ್ಠಾಧಿಕಾರಿ ಬ್ರಿಜೇಶ್ ಕುಮಾರ್ ಹೇಳಿದ್ದಾರೆ.

ನಗ್ರೋಟಾದಲ್ಲಿ ಈ ಘಟನೆ ನಡೆದಿದ್ದು, ಇತ್ತೀಚಿನ ದಿನಗಳಲ್ಲಿ ಈ ರೀತಿ ನಡೆದ 2 ನೇ ಘಟನೆ ಇದಾಗಿದೆ. ಈ ಘಟನೆಯಲ್ಲಿ ಯಾವುದೇ ರಾಜಕೀಯ ಪ್ರೇರಿತ ಅಂಶಗಳಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಹಳೆಯ ವೈಷಮ್ಯದ ಕಾರಣ ಮತ್ತು ವಾಮಾಚಾರ ನಡೆಯುತ್ತಿತ್ತು ಎಂಬ ಶಂಕೆಯಿಂದ ದೇವಸ್ಥಾನವನ್ನು ಧ್ವಂಸಗೊಳಿಸಿದ್ದೇನೆ ಎಂದು ಬಂಧಿತ ಅಜಯ್ ಶರ್ಮಾ ಹೇಳಿದ್ದಾಗಿ ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.

ಕೇಂದ್ರಾಡಳಿತ ಪ್ರದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕದಡುವ ಉದ್ದೇಶದಿಂದ ದೇವಾಲಯಗಳನ್ನು ಧ್ವಂಸ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಪ್ರಚೋದನಾತ್ಮಕ ಪ್ರತಿಕ್ರಿಯೆಗಳು ವ್ಯಕ್ತವಾಗಿತ್ತು.

ಆದಾಗ್ಯೂ, ಘಟನೆಯಲ್ಲಿ ಯಾವುದೇ ರಾಜಕೀಯ ಪ್ರೇರಿತ ಅಂಶಗಳಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಶರ್ಮಾ ಹಳೆಯ ವೈಷಮ್ಯದ ಕಾರಣ ಮತ್ತು ‘ವಾಮಾಚಾರ ನಡೆಯುತ್ತಿತ್ತು ಎಂಬ ಶಂಕೆಯಿಂದ ದೇವಸ್ಥಾನವನ್ನು ಧ್ವಂಸಗೊಳಿಸಿದ್ದ ಮತ್ತು ಬೆಂಕಿ ಹಚ್ಚಲು ಪ್ರಯತ್ನಿಸಿದ್ದಾನೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.

Join Whatsapp
Exit mobile version