ತುಮಕೂರು ವಿವಿಗೆ ಅಜಿತ್ ಹನುಮಕ್ಕನವರ್ ಆಹ್ವಾನ: ವ್ಯಾಪಕ ಆಕ್ರೋಶ

Prasthutha|

ತುಮಕೂರು: ವಿಶ್ವವಿದ್ಯಾನಿಲಯದಲ್ಲಿ ಹಮ್ಮಿಕೊಂಡಿರುವ ಮಾಧ್ಯಮ ಹಬ್ಬಕ್ಕೆ ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರಿಗೆ ಆಹ್ವಾನ ನೀಡಿರುವುದಕ್ಕೆ ಜಿಲ್ಲೆಯಲ್ಲಿ ಪ್ರಗತಿಪರ ಸಂಘಟನೆಗಳು, ಪ್ರಗತಿಪರ ವಿದ್ಯಾರ್ಥಿ-ಯುವಜನರ ವೇದಿಕೆ ಹಾಗೂ ವಿವಿ ಹಳೆಯ ವಿದ್ಯಾರ್ಥಿ ವೇದಿಕೆಗಳಿಂದ ವ್ಯಾಪಕ ಖಂಡನೆ ಮತ್ತು ವಿರೋಧ ವ್ಯಕ್ತವಾಗಿದೆ.

- Advertisement -


ತುಮಕೂರು ವಿಶ್ವವಿದ್ಯಾಲಯ ಜಾತ್ಯತೀತ ಪರಂಪರೆಯನ್ನು ಹೊಂದಿದೆ. ಸಾಮರಸ್ಯತೆಗೆ ಹೆಸರಾಗಿದೆ. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತಿದೆ. ಇಂತಹ ಮಹತ್ವದ ಪರಂಪರೆಯನ್ನು ಸಾರುತ್ತಿರುವ ವಿಶ್ವವಿದ್ಯಾಲಯ ದಲ್ಲಿ ಮತೀಯ ಭಾವನೆಗಳನ್ನು ಕೆರಳಿಸುವ, ವಿಛಿದ್ರಕಾರಿ ಸಂಗತಿಗಳನ್ನು ಪ್ರತಿಪಾದಿಸುವ ಪತ್ರಕರ್ತ ಅಜಿತ್ ಅವರನ್ನು ಯಾವುದೇ ಕಾರಣಕ್ಕೂ ವಿವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕರೆಸುವುದು ಬೇಡ. ಒಂದೊಮ್ಮೆ ಅವರನ್ನು ಕರೆಸಿದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ವಿವಿಧ ಸಂಘಟಗಳು ಎಚ್ಚರಿಕೆ ನೀಡಿವೆ.


ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ವೆಂಕಟೇಶ್ವರಲು ಅವರನ್ನು ಭೇಟಿ ಮಾಡಿದ ಪ್ರಗತಿಪರ ವಿದ್ಯಾರ್ಥಿ-ಯುವಜನರ ಸಂಘಟನೆಗಳ ಒಕ್ಕೂಟ, ಹಳೆಯ ವಿದ್ಯಾರ್ಥಿಗಳ ವೇದಿಕೆ ಮತ್ತು ಜಿಲ್ಲಾ ಸಮಾನ ಮನಸ್ಕರ ವೇದಿಕೆಯ ಪದಾಧಿಕಾರಿಗಳು ಸಮಾಜದಲ್ಲಿ ದ್ವೇಷ ಹರಡುವ ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರನ್ನು ಕರೆಸುವುದನ್ನು ನಿಲ್ಲಿಸಬೇಕು ಸಂಘಟನೆಗಳು ಒತ್ತಾಯಿಸಿವೆ.



Join Whatsapp