ಅಕಾಲಿದಳದ ಹಿರಿಯ ನಾಯಕ ಬಿಜೆಪಿ ಸೇರ್ಪಡೆ

Prasthutha|

ಅಮೃತಸರ: ಶಿರೋಮಣಿ ಅಕಾಲಿದಳ ನಾಯಕ, ದೆಹಲಿ ಸಿಖ್ ಗುರುದ್ವಾರದ ಆಡಳಿತ ನಿರ್ವಾಹಕ ಮಂಜೀಂದರ್ ಸಿಂಗ್ ಸಿರ್ಸಾ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

- Advertisement -

ಮುಂದಿನ ವರ್ಷ ಪಂಜಾಬ್ ಅಸೆಂಬ್ಲಿಗೆ ಚುನಾವಣೆ ನಡೆಯಲಿದ್ದು, ಮಂಜೀಂದರ್ ಸಿಂಗ್ ಬಿಜೆಪಿ ಸೇರ್ಪಡೆ ಮಹತ್ವ ಪಡೆದಿದೆ.

ಮಂಜೀಂದರ್ ಸಿಂಗ್ ಸಿರ್ಸಾ ಅವರು ಕೇಂದ್ರ ಸಚಿವರುಗಳಾದ ಧರ್ಮೇಂದ್ರ ಪ್ರಧಾನ್, ಗಜೇಂದ್ರ ಸಿಂಗ್ ಶೆಖಾವತ್ ಸೇರಿದಂತೆ ಹಿರಿಯ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.

- Advertisement -

ಮಾತ್ರವಲ್ಲ ಸೇರ್ಪಡೆಯ ನಂತರ ಮಂಜೀಂದರ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಈ ವೇಳೆ ಪ್ರತಿಕ್ರಿಯಿಸಿದ ನಡ್ಡಾ, ಸಿರ್ಸಾ ಅವರ ಅನುಭವ ಪಕ್ಷದ ಬಲವರ್ಧನೆಗೆ ನೆರವಾಗಲಿದೆ ಎಂದು ತಿಳಿಸಿದರು.

ಅಕಾಲಿದಳ ರಾಷ್ಟ್ರೀಯ ಮಟ್ಟದ ನಾಯಕರಾಗಿದ್ದ ಮಂಜೀಂದರ್ ಸಿಂಗ್ ಸಿರ್ಸಾ, ಕೇಂದ್ರ ಸರ್ಕಾರ ಜಾರಿಗೆ ತಂದ ನೂತನ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡು ಗಮನ ಸೆಳೆದಿದ್ದರು.

Join Whatsapp