ಜಮೀನು ಹೊರಗಿನವರಿಗೆ ಮಾರಾಟ: ಬಿಜೆಪಿ ವಿರುದ್ಧ ಅಖೀಲೇಶ್ ಆರೋಪ

Prasthutha|

ಲಕ್ನೋ: ಅಯೋಧ್ಯೆಯಲ್ಲಿ ಭೂಮಿಯನ್ನು ಹೊರಗಿನವರಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಎಸ್ ಪಿ ಮುಖ್ಯಸ್ಥ ಅಖೀಲೇಶ್ ಯಾದವ್ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.

- Advertisement -


ಈ ಭೂ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಅಯೋಧ್ಯೆಯಲ್ಲಿ ನಡೆಯುತ್ತಿರುವ ಭೂ ಮಾಫಿಯಾ ಇದೀಗ ಬಯಲಾಗಿದೆ. ಬಿಜೆಪಿ ಆಡಳಿತದಲ್ಲಿ ಈ ಸತ್ಯ ಹೊರ ಬಂದಿದೆ. ಹೊರಭಾಗದ ಜನರು ಅಯೋಧ್ಯೆಯಲ್ಲಿ ಭೂಮಿಯನ್ನು ದೊಡ್ಡ ಪ್ರಮಾಣದಲ್ಲಿ ಖರೀದಿಸಿ ಮಾರಾಟ ಮಾಡುತ್ತಿದ್ದಾರೆ ಎಂದಿದ್ದಾರೆ.



Join Whatsapp