ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ನ.22ರವರೆಗೆ ನ್ಯಾಯಾಂಗ ಬಂಧನ

Prasthutha|

ಪುತ್ತೂರು : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ನ.22 ರ ತನಕ ನ್ಯಾಯಾಂಗ ಕಸ್ಟಡಿಗೊಳಪಡಿಸಿ ಆದೇಶ ನೀಡಿದ್ದಾರೆ.

- Advertisement -

ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್ ಎಂಬವರನ್ನು ನ್ಯಾಯಾಂಗ ಕಸ್ಟಡಿಗೊಳಪಡಿಸಿ ಆದೇಶ ನೀಡಿದ್ದಾರೆ.

ಕ್ಷುಲ್ಲಕ ಕಾರಣಕ್ಕಾಗಿ ಅಕ್ಷಯ್ ಕಲ್ಲೇಗ ಅವರನ್ನು ತಂಡವೊಂದು ಅಟ್ಟಾಡಿಸಿ ತಲವಾರಿನಿಂದ ಕಡಿದು ಕೊಲೆ ನಡೆಸಿದ ಘಟನೆ ಪುತ್ತೂರು ತಾಲೂಕಿನ ಕಬಕ ಗ್ರಾಮದ ನೆಹರೂನಗರ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿತ್ತು.



Join Whatsapp