“ನನ್ನಿಂದ ತಪ್ಪಾಯ್ತು”: ಪಾನ್ ಮಸಾಲ ಬ್ರ್ಯಾಂಡ್ ಅಂಬಾಸಿಡರ್ ತೊರೆದ ಅಕ್ಷಯ್ ಕುಮಾರ್

Prasthutha|

ಮುಂಬೈ: ಪಾನ್ ಮಸಾಲ ಬ್ರ್ಯಾಂಡ್ ಅಂಬಾಸಿಡರ್ ಪಟ್ಟ ತೊರೆದಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ನನ್ನಿಂದ ತಪ್ಪಾಯ್ತು ಎಂದು ಅಭಿಮಾನಿಗಳಲ್ಲಿ ಕ್ಷಮೆ ಕೋರಿದ್ದಾರೆ. ಬ್ರ್ಯಾಂಡ್ ಅಂಬಾಸಿಡರ್ ಆಗುತ್ತಿರುವುದರ ಬಗ್ಗೆ ಭಾರೀ ಟ್ರೋಲ್’ಗೊಳಗಾಗಿದ್ದ ಅಕ್ಷಯ್, ಇದೀಗ ನನ್ನಿಂದ ತಪ್ಪಾಗಿದೆ ಎನ್ನುತ್ತಾ ಅಂಬಾಸಿಡರ್ ಪಟ್ಟವನ್ನು ತ್ಯಜಿಸಿದ್ದಾರೆ.

- Advertisement -

ಬಾಲಿವುಡ್ ಕಿಂಗ್ ಖಾನ್ ಶಾರುಖ್ ಮತ್ತು ಅಜಯ್ ದೇವಗನ್ ಜೊತೆಯಾಗಿ ಅಕ್ಷಯ್ ಪಾನ್ ಮಸಾಲಾ ಬ್ರಾಂಡ್ ಜಾಹಿರಾತಿಗಾಗಿ ಕೆಲಸ ಮಾಡುತ್ತಿದ್ದರು. ಅಕ್ಷಯ್ ಪಾನ್ ಮಸಾಲ ಜಾಹಿರಾತಿಗೆ ಅಭಿಮಾನಿಗಳಿಂದ ವಿರೋಧ ವ್ಯಕ್ತ ಉಂಟಾಗಿತ್ತು, ಹೀಗಾಗಿ ಇನ್ಸ್ಟಾಗ್ರಾಂ ಮೂಲಕ ಬರೆದು ಕ್ಷಮೆಯಾಚಿಸಿದ್ದಾರೆ.

ನನ್ನನ್ನು ಕ್ಷಮಿಸಿ, ನನ್ನ ಎಲ್ಲಾ ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ನಾನು ಕ್ಷಮೆ ಯಾಚಿಸಲು ಬಯಸುತ್ತೇನೆ. ಕಳೆದ ಕೆಲವು ದಿನಗಳಿಂದ ನಿಮ್ಮ ಪ್ರತಿಕ್ರಿಯೆಗಳು ನನ್ನ ಮೇಲೆ ಗಾಢ ಪರಿಣಾಮ ಬೀರಿದೆ. ನಾನು ತಂಬಾಕನ್ನು ಎಲ್ಲೂ ಅನುಮೋದಿಸಿಲ್ಲ ಮತ್ತು ಅನುಮೋದಿಸುವುದೂ ಇಲ್ಲ. ಆದರೆ ನಾನು ಗೌರವಿಸುತ್ತೇನೆ. ವಿಮಲ್ ಎಲೈಚಿ ಅವರೊಂದಿಗೆ ನನ್ನ ಒಡನಾಟ ನಿಮ್ಮ ಭಾವನೆಗಳಿಗೆ ನೋವುಂಟು ಮಾಡಿರುವುದು ನನಗೆ ತಿಳಿದಿದೆ. ಹೀಗಾಗಿ ನಾನು ಇದರಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಬರೆದು ಬುಧವಾರ ಮಧ್ಯರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

Join Whatsapp