ಆಲ್ದೂರು: ಸಂಪೂರ್ಣ ಹದಗೆಟ್ಟ ರಸ್ತೆ; ತೊಂದರೆ ಅನುಭವಿಸುತ್ತಿರುವ ಗ್ರಾಮಸ್ಥರು

Prasthutha|

ಚಿಕ್ಕಮಗಳೂರು: ಆಲ್ದೂರು  ಸಮೀಪದ ಮಾಚಗೊಂಡನಹಳ್ಳಿಯ ಅಂಬೇಡ್ಕರ್ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರವಾಗಿದ್ದು, ರಸ್ತೆಯನ್ನು ಅಭಿವೃದ್ಧಿಪಡಿಸಿ ಸಂಚಾರಕ್ಕೆ ಯೋಗ್ಯವಾಗಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

- Advertisement -

ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಹಿರಿಯ ಪ್ರಾಥಮಿಕ ಪಾಠಶಾಲೆ, ಸರ್ಕಾರಿ ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಪಶು ಆಸ್ಪತ್ರೆಗೆ ಇದೇ ರಸ್ತೆಯ ಮೂಲಕ ಸಂಚರಿಸಬೇಕಿದ್ದು, ಮಳೆಗಾಲದಲ್ಲಿ ಕೆಸರು ಗದ್ದೆಯಂತಾಗುವ ಈ ರಸ್ತೆಯಲ್ಲಿ ಸಂಚರಿಸುವುದು ಕಷ್ಟವಾಗಿದೆ. ರೋಗಿಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು, ಭಾನುವಾರ ನಡೆಯುವ ವಾರದ ಸಂತೆಗೆ ಬರಲು ಜನರು ತೊಂದರೆ ಅನುಭವಿಸುತ್ತಿದ್ದಾರೆ. 250 ಮೀಟರ್‌ ಉದ್ದವಿರುವ ಈ ರಸ್ತೆ ಹೊಂಡಗಳಿಂದ ತುಂಬಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

‘ಎರಡೂವರೆ ದಶಕಗಳಿಂದ ಈ ರಸ್ತೆಯ ಅಭಿವೃದ್ಧಿಯು ಕನಸಾಗಿಯೇ ಉಳಿದಿದೆ.ರಸ್ತೆ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿ ಅನುದಾನದ ಕೊರತೆ ಇದ್ದು, ಶಾಸಕರಿಗೆ ಮನವಿ ಮಾಡಲಾಗಿದೆ ಎಂದು ಪಿಡಿಒ ಪರಶುರಾಮ್‌ ಹೇಳಿದರು.

Join Whatsapp