Home ಟಾಪ್ ಸುದ್ದಿಗಳು ಹೈಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಿ, ಮೇಲ್ಮನವಿ ಸಲ್ಲಿಸುವುದಕ್ಕೆ ಅವಕಾಶವಿದೆ: ಯು.ಟಿ ಖಾದರ್

ಹೈಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಿ, ಮೇಲ್ಮನವಿ ಸಲ್ಲಿಸುವುದಕ್ಕೆ ಅವಕಾಶವಿದೆ: ಯು.ಟಿ ಖಾದರ್

ಬೆಂಗಳೂರು: ಹಿಬಾಜ್ ಇಸ್ಲಾಮಿನ ಅತ್ಯಗತ್ಯ ಭಾಗವಲ್ಲ ಎಂದು ಕರ್ನಾಟಕ ಹೈಕೋರ್ಟ್ ಇಂದು ತೀರ್ಪು ನೀಡಿದ್ದು, ಹೈಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು. ಮೇಲ್ಮನವಿ ಸಲ್ಲಿಸುವುದಕ್ಕೆ ಅವಕಾಶವಿದೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಯಾವುದೇ ಆತಂಕ ಇಲ್ಲ. ಕೋಮುಸೌಹಾರ್ದತೆಗೆ ಸಮಸ್ಯೆ ಉಂಟಾಗುವ ಆತಂಕವಿಲ್ಲ. ವಿದ್ಯಾರ್ಥಿಗಳು ಅದರಲ್ಲೂ ಹೆಣ್ಣುಮಕ್ಕಳ ಶಿಕ್ಷಣ ಮುಖ್ಯ. ಶಾಲಾ ಮಟ್ಟದಲ್ಲಿಯೇ ಸಮಸ್ಯೆ ಬಗೆಹರಿಸಬಹುದಾಗಿತ್ತು. ಕೋರ್ಟ್‌ ವರೆಗೆ ಬರಬೇಕಾದ ಅಗತ್ಯತೆ ಇರಲಿಲ್ಲ ಎಂದು ಹೇಳಿದ್ದಾರೆ.

Join Whatsapp
Exit mobile version