ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಪ್ರತೀ ಮನೆಗೆ ತಲುಪಿಸಲು ಕಾರ್ಯಕರ್ತರೆಲ್ಲರೂ ಸಜ್ಜಾಗಬೇಕು: ಇನಾಯತ್ ಅಲಿ

Prasthutha|

ಮಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪ್ರತೀ ಮನೆಗೆ ತಲುಪಿಸಲು ಕಾರ್ಯಕರ್ತರೆಲ್ಲರೂ ಸಜ್ಜಾಗಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಕರೆ ನೀಡಿದ್ದಾರೆ.

- Advertisement -


ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪ್ರತೀ ಮನೆಗೆ ತಲುಪಿಸುವ ಅಭಿಯಾನದ ಪೂರ್ವಭಾವಿಯಾಗಿ, ನಿನ್ನೆ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾವೂರಿನ ಗುರು ವೈದ್ಯನಾಥ ಸಭಾಭವನದಲ್ಲಿ ಆಯೋಜಿಸಿದ ಸಮಾಲೋಚನಾ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭಾಗವಹಿಸಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.


ಈ ಸಂಧರ್ಭ ಕಾಂಗ್ರೆಸ್ ಪಕ್ಷದ ಗ್ಯಾರಂಟಿ, ಜನಪರ ಯೋಜನೆಗಳನ್ನು ಕ್ಷೇತ್ರದ ಪ್ರತೀ ಮನೆಗೆ ತಲುಪಿಸಲು ಹಮ್ಮಿಕೊಳ್ಳಲಾಗುವ ವಿಶೇಷ ಅಭಿಯಾನವನ್ನು ಯಶಸ್ವಿಗೊಳಿಸಲು ಕಾರ್ಯಕರ್ತರೆಲ್ಲರೂ ಸಜ್ಜಾಗಬೇಕು ಎಂದು ಸಭೆಯಲ್ಲಿ ತಿಳಿಸಿದರು.

Join Whatsapp