ಪಾದ್ರಿಗಳ ಮೇಲೆ ಸಂಘಪರಿವಾರದಿಂದ ಅಮಾನುಷ ಹಲ್ಲೆ

Prasthutha|

ಚತ್ತೀಸ್’ಗಢ: ಹಿಂದೂಗಳನ್ನು ಅಕ್ರಮವಾಗಿ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಕ್ರಿಶ್ಚಿಯನ್ ಪಾದ್ರಿಗಳ ಮೇಲೆ ಸಂಘಪರಿವಾರದ ಕಾರ್ಯಕರ್ತರು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಚತ್ತೀಸ್’ಗಢದ ರಾಯ್’ಪುರದಲ್ಲಿ ನಡೆದಿದೆ.

- Advertisement -

ಹಿಂದೂಗಳನ್ನು ಅಕ್ರಮವಾಗಿ ಮತಾಂತರ ಮಾಡಲಾಗುತ್ತಿರುವ ಕುರಿತು ಸಂಘಪರಿವಾರದ ಕಾರ್ಯಕರ್ತರು ಸ್ಥಳೀಯ ಠಾಣೆಗೆ ದೂರು ನೀಡಿದ್ದು, ಇದಕ್ಕೆ ಸಂಬಂಧಿಸಿದಂತೆ ರಾಯ್’ಪುರ ಪೊಲೀಸರು ಇಬ್ಬರು ಪಾದ್ರಿಗಳನ್ನು ಠಾಣೆಗೆ ಕರೆಯಿಸಿದ್ದರು. ಈ ವೇಳೆ ಅಕ್ರಮವಾಗಿ ಠಾಣೆಗೆ ನುಗ್ಗಿದ ಸಂಘಪರಿವಾರದ ಕಾರ್ಯಕರ್ತರು ಪೊಲೀಸರ ಸಮ್ಮುಖದಲ್ಲೇ ಪಾದ್ರಿಗಳಿಗೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ.

ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಂಘಪರಿವಾರದ ಗೂಂಡಾಗಳು ಗುಂಪು ಕಟ್ಟಿ ಹಲ್ಲೆ ನಡೆಸುತ್ತಿರುವುದು ಸೆರೆಯಾಗಿದೆ.



Join Whatsapp