Home ಟಾಪ್ ಸುದ್ದಿಗಳು ಒಕ್ಕಲಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಭಗವಾನ್ ವಿರುದ್ಧ ಎಫ್​ಐಆರ್​

ಒಕ್ಕಲಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಭಗವಾನ್ ವಿರುದ್ಧ ಎಫ್​ಐಆರ್​

ಮೈಸೂರು: ಒಕ್ಕಲಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಪ್ರೊ. ಕೆ.ಎಸ್​. ಭಗವಾನ್ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು,  ಕೊನೆಗೂ ಎಫ್​ಐಆರ್​ ದಾಖಲಾಗಿದೆ. ರಾಷ್ಟ್ರಕವಿ ಕುವೆಂಪುರವರ ಮಾತನ್ನು ಉಲ್ಲೇಖಿಸಿದ್ದಕ್ಕೆ ಭಗವಾನ್ ಒಕ್ಕಲಿಗರನ್ನು ನಿಂದಿಸಿದ್ದಾರೆಂದು ಆರೋಪಿಸಲಾಗಿತ್ತು.

ಕರ್ನಾಟಕ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಮೈಸೂರಿನ ಗಂಗಾಧರ್ ಎಂಬುವವರು ಪೊಲೀಸ್ ದೂರು ನೀಡಿದ್ದರು. ಪ್ರೊ. ಭಗವಾನ್ ಶ್ರೀರಾಮ ಹಾಗೂ ಒಕ್ಕಲಿಗ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುತ್ತಾರೆ ಎಂದು ಆರೋಪಿಸಿದ್ದರು.  ಆ ದೂರಿನ ಆಧಾರದ ಮೇಲೆ ಭಗವಾನ್ ವಿರುದ್ಧ  ಐಪಿಸಿ ಸೆಕ್ಷನ್ 153 ಹಾಗೂ 153A ಅಡಿಯಲ್ಲಿ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್​ ದಾಖಲಾಗಿದೆ.

ಅ. 13ರಂದು ಮೈಸೂರಿನ ಟೌನ್‌ಹಾಲ್ ಬಳಿ ಮಹಿಷ ದಸರಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೆ.ಎಸ್.ಭಗವಾನ್, ಒಕ್ಕಲಿಗರ ಬಗ್ಗೆ ಕುವೆಂಪುರವರು ಕಾಳಜಿಯಿಂದ ಬರೆದುದನ್ನು ಉಲ್ಲೇಖಿಸಿದ್ದರು. ಬಳಿಕ  ಕೆ.ಎಸ್. ಭಗವಾನ್ ವಿರುದ್ಧ ಒಕ್ಕಲಿಗರು ಆಕ್ರೋಶ ವ್ಯಕ್ತಪಡಿಸಿ, ಸಾಲು ಸಾಲು ಪ್ರತಿಭಟನೆಗಳನ್ನು ನಡೆಸಿದ್ದರು. ರಾಜ್ಯದ ಅನೇಕ ಪೊಲೀಸ್​ ಠಾಣೆಗಳಲ್ಲಿ ಭಗವಾನ್​ ವಿರುದ್ಧ ಒಕ್ಕಲಿಗ ಸಂಘಟನೆಗಳು ದೂರು ಸಹ ದಾಖಲಿಸಿದ್ದವು. ಅಂತಿಮವಾಗಿ ಮೈಸೂರಿನ ದೇವರಾಜ ಪೊಲೀಸ್​ ಠಾಣೆಯಲ್ಲಿ ಭಗವಾನ್​ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

Join Whatsapp
Exit mobile version