ಮಂಗಳೂರು | SDPI ಕಾರ್ಯಕರ್ತರಿಂದ ಪೊಲೀಸರಿಗೆ ನಿಂದನೆ ಆರೋಪ; ಪ್ರಕರಣ ದಾಖಲು

Prasthutha|

ಮಂಗಳೂರು: SDPI ಕಾರ್ಯಕರ್ತರು ಎನ್ನಲಾದ ಯುವಕರ ಗುಂಪೊಂದು ಪೊಲೀಸರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದೆ ಎಂದು ಆರೋಪದಡಿಯಲ್ಲಿ ಕಂಕನಾಡಿ ನಗರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

ಮಂಗಳೂರು ಕಣ್ಣೂರಿನಲ್ಲಿ ಮೇ 27 ರಂದು SDPI ದ.ಕ. ಜಿಲ್ಲಾ ಸಮಿತಿ ವತಿಯಿಂದ ಜನಾಧಿಕಾರ ಸಮಾವೇಶ ಎಂಬ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದರಲ್ಲಿ SDPI ಕಾರ್ಯಕರ್ತರು ಎನ್ನಲಾದ ಯುವಕರ ಗುಂಪೊಂದು ತಮ್ಮ ವಾಹನದಲ್ಲಿ ಪೊಲೀಸರು ವಿರುದ್ಧ ಅವಾಚ್ಯ ಪದ ಬಳಕೆ ಮಾಡಿ ನಿಂದಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಘಟನೆಗೆ ಸಂಬಂಧಿಸಿದಂತೆ ಚೆಕ್ ಪೋಸ್ಟ್ ಕರ್ತವ್ಯದಲ್ಲಿ ASI ಚಂದ್ರಶೇಖರ್ ಎಂಬವರು ನೀಡಿದ ದೂರಿನ ಆಧಾರದಲ್ಲಿ ಐಪಿಸಿ ಸೆಕ್ಷನ್ 143, 353, 504, 149 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ ಕರ್ತವ್ಯದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಸಂಗನ ಗೌಡ ಎಂಬಾತನ ಮೈಮೇಲೆ ಬೈಕ್ ಹಾಯಿಸುವ ರೀತಿಯಲ್ಲಿ ಆರೋಪಿಗಳು ತಮ್ಮ ಬೈಕನ್ನು ಸವಾರಿ ನಡೆಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು ಎಂದು ದೂರಲಾಗಿದೆ.

- Advertisement -

ಸದ್ಯ ಅಪರಿಚಿತ 5 ಮಂದಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Join Whatsapp