ಕೋಮು ಹಿಂಸಾಚಾರದ ಹೇಳಿಕೆಯೇ ಸ್ಫೋಟಗಳಿಗೆ ಪ್ರೇರಣೆ: ಕುಮಾರಸ್ವಾಮಿ ಆರೋಪ

Prasthutha|

ಕೋಲಾರ: ಸಮಾಜದಲ್ಲಿ ಜವಾಬ್ದಾರಿ ಸ್ಥಾನದಲ್ಲಿರುವ ಕೆಲವು ವ್ಯಕ್ತಿಗಳ ಕೋಮು ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುವ ಹೇಳಿಕೆಯೇ ಸ್ಫೋಟದಂತಹ ಘಟನೆಗೆ ಪ್ರೇರಣೆ ನೀಡುತ್ತದೆ ಎಂದು ಜೆಡಿಎಸ್ ಮುಖಂಡ ಕುಮಾರಸ್ವಾಮಿ ಆರೋಪಿಸಿದ್ದಾರೆ.

- Advertisement -

ಜೆಡಿಎಸ್ ಆಯೋಜಿಸಿದ ಪಂಚರತ್ನ ರಥಯಾತ್ರೆಯ ವೇಳೆ ಕೋರಗಂಡಹಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡೂ ರಾಷ್ಟ್ರೀಯ ಪಕ್ಷಗಳು ಕರಾವಳಿ ಪ್ರದೇಶದಲ್ಲಿ ಕೋಮು ಸಂಘರ್ಷದ ಪರಿಸ್ಥಿತಿ ನಿರ್ಮಾಣ ಮಾಡಿದೆ. ಈ ಹಿನ್ನೆಲೆಯಲ್ಲಿ ಸ್ಫೋಟಗಳು ಉಂಟಾಗಿದ್ದು, ಆರ್ಥಿಕ ವ್ಯವಹಾರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ನಿಟ್ಟಿನಲ್ಲಿ ಜನರು ಆತಂಕದಲ್ಲಿದ್ದಾರೆ ಎಂದು ತಿಳಿಸಿದರು.

ಮಂಗಳೂರಿನಲ್ಲಿ ನಡೆದ ಸ್ಫೋಟ ಪ್ರಕರಣವನ್ನು ನಾನು ಖಂಡಿಸುತ್ತೇನೆ. ಇದರ ಹಿಂದಿರುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಪೊಲೀಸರ ಮೇಲೆ ರಾಜಕೀಯ ಒತ್ತಡ ಹಾಕದೆ ನಿಷ್ಪಕ್ಷಪಾತವಾದ ತನಿಖೆಗೆ ಅವಕಾಶ ನೀಡಬೇಕು. ಇದರ ಹಿಂದಿರುವ ಯಾವುದೇ ಸಂಘಟನೆಯ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Join Whatsapp