ದನ ಕಡಿದ ಆರೋಪ; ದಲಿತರ ಮೇಲೆ ಹಲ್ಲೆ ನಡೆಸಿದ ಬಜರಂಗದಳ ಕಾರ್ಯಕರ್ತರು

Prasthutha|

ಹಾಸನ: ದಲಿತರು ದನ ಕಡಿದಿದ್ದಾರೆ ಎಂದು ಆರೋಪಿಸಿ ಬಜರಂಗದಳದ ಕಾರ್ಯಕರ್ತರು ದಲಿತರ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಸಕಲೇಶಪುರ ತಾಲೂಕಿನ ಮಳಲಿ ಗ್ರಾಮದಲ್ಲಿ ನಡೆದಿದೆ.

- Advertisement -


ಹಲ್ಲೆಗೊಳಗಾದವರನ್ನು ಮಳಲಿ ಗ್ರಾಮದ ಲೋಕೇಶ್( 35 ) ಮತ್ತು ಚಂದ್ರು (40) ಎಂದು ಗುರುತಿಸಲಾಗಿದೆ. ಹಲ್ಲೆಯಿಂದಾಗಿ ಲೊಕೇಶ್ ಅವರ ತಲೆಗೆ ಗಂಭೀರ ಗಾಯಗಳಾಗಿವೆ.


ಆರೋಪಿಗಳನ್ನು ಶಿವು, ರವಿ, ಶ್ರೀಜಿತ್ ಗೌಡ ಹಾಗೂ ರವಿ ಮಳಲಿ ಎಂದು ಗುರುತಿಸಲಾಗಿದ್ದು, ಇವರ ವಿರುದ್ದ ದಲಿತ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪೊಲೀಸರು ಎಫ್‌ಐಆರ್‌‌ ದಾಖಲಿಸಿದ್ದಾರೆ.

- Advertisement -


ಈ ಮಧ್ಯೆ ದನ ಕಡಿದ ಅರೋಪದ ಮೇಲೆ ಲೋಕೇಶ್ ಮತ್ತು ಚಂದ್ರು ಅವರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp