ನ್ಯಾಯಾಲಯದ ತೀರ್ಪು ಉಲ್ಲಂಘನೆ ಆರೋಪ; ಶಿರವಸ್ತ್ರ ಧರಿಸಿ ಬಂದ ಆರು ವಿದ್ಯಾರ್ಥಿನಿಯರ ಅಮಾನತು

Prasthutha|

ಉಪ್ಪಿನಂಗಡಿ : ಹಿಜಾಬ್ ಧರಿಸಿ ತರಗತಿಗೆ ಪ್ರವೇಶಿಸಿದ ಆರು ಮಂದಿ ವಿದ್ಯಾರ್ಥಿನಿಯರನ್ನು ಮುಂದಿನ ಆದೇಶದವರೆಗೆ ಅಮಾನತುಗೊಳಿಸಿದ ಘಟನೆ  ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.

- Advertisement -

ಯಾವುದೇ ಕಾರಣಕ್ಕೂ ಕಾಲೇಜಿನಲ್ಲಿ ಹಿಜಾಬ್ ಧರಿಸಬಾರದು ಎಂಬ ಸರ್ಕಾರ ಹಾಗೂ ಹಾಗೂ ನ್ಯಾಯಾಲಯದ ಆದೇಶವನ್ನು ಪಾಲಿಸದೇ  ಹಿಜಾಬ್ ಧರಿಸಿಕೊಂಡು ತರಗತಿಯೊಳಗೆ ಪ್ರವೇಶಿಸುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಲೇಜು ಉಪನ್ಯಾಸಕರ ಸಭೆಯ ಒಮ್ಮತದ ತೀರ್ಮಾನದಂತೆ   ಶಿಸ್ತು ಕ್ರಮ ಜರಗಿಸುವ ಸಲುವಾಗಿ ಪ್ರಾಂಶುಪಾಲ ಶೇಖರ್ ಕನ್ನಡ ಈ ಆದೇಶ ನೀಡಿದ್ದಾರೆ ಎಂದು ತಿಳಿದುಬಂದಿದೆ.

Join Whatsapp