ಅಮರೀಂದರ್ ಸಿಂಗ್ – ಅಮಿತ್ ಶಾ ಭೇಟಿ | ವಿವಾದ ಬೇಗ ಇತ್ಯರ್ಥಗೊಳಿಸುವಂತೆ ರೈತರು, ಗೃಹ ಸಚಿವಗೆ ಪಂಜಾಬ್ ಸಿಎಂ ಮನವಿ

Prasthutha|

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸರಕಾರದ ನೂತನ ಕೃಷಿ ನೀತಿ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸಂಬಂಧಿಸಿ, ವಿವಾದವನ್ನು ಇತ್ಯರ್ಥಗೊಳಿಸುವಂತೆ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ರೈತರು ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಕೋರಿದ್ದಾರೆ.

- Advertisement -

ಅಮಿತ್ ಶಾ ಅವರನ್ನು ನಿವಾಸದಲ್ಲಿ ಭೇಟಿಯಾದ ಬಳಿಕ ಅಮರೀಂದರ್ ಸಿಂಗ್ ಮಾತನಾಡುತ್ತಾ, ಶೀಘ್ರದಲ್ಲೇ ಸಾಮಾನ್ಯ ನೆಲೆಯನ್ನು ಕಂಡುಕೊಳ್ಳಬೇಕು, ಎರಡೂ ಕಡೆಯವರೂ ಕಠಿಣ ನಿಲುವು ತೆಗೆದುಕೊಳ್ಳಬಾರದು ಎಂದಿದ್ದಾರೆ.

ಪ್ರತಿಭಟನೆಯಿಂದಾಗಿ ಪಂಜಾಬ್ ನ ಆರ್ಥಿಕತೆಗೆ ನಷ್ಟವಾಗುತ್ತಿದೆ ಎಂದು ಅಭಿಪ್ರಾಯ ಪಟ್ಟಿರುವ ಅವರು, ವಿವಾದ ಬೇಗ ಇತ್ಯರ್ಥ ಪಡಿಸುವಂತೆ ಅಮಿತ್ ಶಾಗೆ ತಾವು ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ.  

Join Whatsapp