ಮುಸ್ಲಿಮ್ ವಿದ್ಯಾರ್ಥಿಗಳಿಗೆ ಹಿಜಾಬ್ ಹೆಸರಿನಲ್ಲಿ ಕಿರುಕುಳ: ಸಿದ್ದರಾಮಯ್ಯರನ್ನು ಭೇಟಿಯಾದ ಅಮೀರೆ ಶರೀಯತ್

Prasthutha|

ಬೆಂಗಳೂರು: ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿನ ನೆಪದಲ್ಲಿ ಮುಸ್ಲಿಮ್ ವಿದ್ಯಾರ್ಥಿಗಳನ್ನು ತರಗತಿಗಳಿಂದ ಹೊರಗಿಡಲಾಗುತ್ತಿದ್ದು, ಈ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಿ ಸಮಸ್ಯೆಗೆ ಪರಿಹಾರ ನೀಡಬೇಕು ಎಂದು ಮುಸ್ಲಿಮ್ ಧಾರ್ಮಿಕ ಮುಖಂಡರು ಗುರುವಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

- Advertisement -

ಕರ್ನಾಟಕ ಅಮೀರೆ ಶರೀಫ್ ಅವರ ನೇತೃತ್ವದ ನಿಯೋಗದಲ್ಲಿ ಶಾಸಕರಾದ  ಝಮೀರ್ ಅಹ್ಮದ್, ಕೆ.ಜೆ.ಜಾರ್ಜ್, ನಸೀರ್ ಅಹ್ಮದ್, ರಿಝ್ವಾನ್ ಅರ್ಷದ್ ಸೇರಿದಂತೆ ಇತರ ಜನಪ್ರತಿನಿಧಿಗಳು ಭಾಗವಹಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ವಿಧಾನಸಭೆಯಲ್ಲಿ ವಿಷಯವನ್ನು ಪ್ರಸ್ತಾಪಿಸಲಾಗುವುದು ಎಂದು ಭರವಸೆ ನೀಡಿದರು.

Join Whatsapp