ಅಮಿತ್ ಶಾ ಭಾಷಣ ತಿರುಚಿದ ಪ್ರಕರಣ: ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್

Prasthutha|

ದೆಹಲಿ: ಅಮಿತ್ ಶಾ ಅವರು ಎಸಿ,ಎಸ್ ಟಿ, ಒಬಿಸಿ ಮೀಸಲಾತಿ ತೆಗೆದು ಹಾಕುತ್ತೇವೆ ಎಂದು ಭಾಷಣವನ್ನು ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿಗೆ ಸಮನ್ಸ್ ನೀಡಿಲಾಗಿದೆ.

- Advertisement -


ದೆಹಲಿ ಪೊಲೀಸರು ಈ ಸಮನ್ಸ್ ನೀಡಿದ್ದಾರೆ. ಮೀಸಲಾತಿ ತೆಗೆದು ಹಾಕಲಾಗುವುದು ಎಂದು ವಿಡಿಯೋವನ್ನು ತಿರುಚಲಾಗಿದೆ, ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ತಿರುಚಿ ವಿಡಿಯೋ ಮಾಡಲಾಗಿದೆ ಎಂದು ಹೇಳಲಾಗಿತ್ತು. ಈ ಬಗ್ಗೆ ತನಿಖೆ ವಹಿಸಿಕೊಂಡ ದೆಹಲಿ ಪೊಲೀಸರು ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್ ನೀಡಲಾಗಿದೆ.


ಮೇ 1ಕ್ಕೆ ವಿಚಾರಣೆಗೆ ಬರುವಂತೆ ದೆಹಲಿ ಪೊಲೀಸರು ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಹೇಳಿದ್ದಾರೆ. ಜೊತೆಗೆ ಅವರು ಬಳಸಿದ ಎಲ್ಲಾ ಎಲೆಕ್ಟ್ರಾನಿಕ್ ಗ್ಯಾಜೆಟ್ ಗಳನ್ನು ತರುವಂತೆ ತಿಳಿಸಿದ್ದಾರೆ.



Join Whatsapp