Home ಟಾಪ್ ಸುದ್ದಿಗಳು ಅಮರಾವತಿ ಹಿಂಸಾಚಾರ: ಗಲಭೆಗೆ ಪ್ರಚೋದನೆ ನೀಡಿದ ಬಿಜೆಪಿ ಮುಖಂಡನ ಬಂಧನ

ಅಮರಾವತಿ ಹಿಂಸಾಚಾರ: ಗಲಭೆಗೆ ಪ್ರಚೋದನೆ ನೀಡಿದ ಬಿಜೆಪಿ ಮುಖಂಡನ ಬಂಧನ

ಪುಣೆ: ಅಮರಾವತಿ ಮುಸ್ಲಿಮರನ್ನು ಗುರಿಯಾಗಿಸಿ ನಡೆದ ಗಲಭೆಗೆ ಸಂಬಂಧಿಸಿದಂತೆ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ, ಬಿಜೆಪಿ ಮುಖಂಡ ಡಾ. ಅನಿಲ್ ಬೋಂಡೆ ಸೇರಿದಂತೆ ಇತರ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ನಂತರ ಮತ್ತೋರ್ವ ಬಿಜೆಪಿ ಮುಖಂಡ ಪ್ರವೀಣ್ ಪೋಟೆ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ ಎಂದು ಹೇಳಲಾಗಿದೆ.

ಅಮರಾವತಿಯ ಕೊತ್ವಾಲಿ ಎಂಬಲ್ಲಿ ಶನಿವಾರ ಬಿಜೆಪಿ ಬಂದ್ ಗೆ ಕರೆ ನೀಡಿದಾಗ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಈ ಬಂಧನಗಳು ನಡೆಯುತ್ತಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಮಾತ್ರವಲ್ಲ ಅಮರಾವತಿ ಬಂದ್ ವೇಳೆ ಮುಸ್ಲಿಮ್ ಸಮುದಾಯದ ಒಡೆತನದಲ್ಲಿರುವ ಅಂಗಡಿ ಮುಂಗಟ್ಟುಗಳನ್ನು ಧ್ವಂಸಗೈದು, ಬೆಂಕಿ ಹಚ್ಚಲಾಗಿತ್ತು.

ಈ ಸಂಬಂಧ ಬಿಜೆಪಿ ಮುಖಂಡ ಅನಿಲ್ ಬೋಂಡೆ ಸೇರಿದಂತೆ ಹಲವಾರು ಬಿಜೆಪಿ ಮತ್ತು ಸಂಘಪರಿವಾರದ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

Join Whatsapp
Exit mobile version