ಕರೆಂಟ್ ಕಂಬವೇರಿದ್ದ ಎಲೆಕ್ಟ್ರೀಷಿಯನ್ ವಿದ್ಯುತ್​ ತಗುಲಿ ಮೃತ್ಯು

Prasthutha|

ಬಳ್ಳಾರಿ: ಕರೆಂಟ್ ಕಂಬವೇರಿದ್ದ ಎಲೆಕ್ಟ್ರೀಷಿಯನ್ ವಿದ್ಯುತ್​ ತಗುಲಿ ಮೃತಪಟ್ಟ ಘಟನೆ ಜಿಲ್ಲೆಯ ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದಲ್ಲಿ ನಡೆದಿದೆ.

- Advertisement -

ಭದ್ರ(33) ಮೃತ ಎಲೆಕ್ಟ್ರೀಷಿಯನ್.

ಮೃತ ಭದ್ರ ದಮ್ಮೂರು ಗ್ರಾಮದಲ್ಲಿ ವ್ಯವಸಾಯದ ಜೊತೆಗೆ ಎಲೆಕ್ಟ್ರೀಷಿಯನ್ ಕೆಲಸವನ್ನು ಮಾಡಿಕೊಂಡಿದ್ದರು. ರೈತರು ಹೊಲಗಳಿಗೆ ನೀರು ಹರಿಸಲು ಲೈನಿನ ವೈರ್​ಗೆ ಕನೆಕ್ಷನ್ ಕೊಡಲು ಭದ್ರನಿಗೆ ಹೇಳುತ್ತಾರೆ. ಎಂದಿನಂತೆ ಕನೆಕ್ಷನ್ ಕೊಡಲು ಭದ್ರ ಕಂಬವೇರೆದ್ದರು. ಆದರೆ ಲೈನ್​ನಲ್ಲಿ ದಿಢೀರನೇ ವಿದ್ಯುತ್ ಹರಿದ ಪರಿಣಾಮ ಭದ್ರ ಸ್ಥಳದಲ್ಲಿ ಸುಟ್ಟು ಕರಕಲಾಗಿದ್ದಾರೆ. ಜೊತೆಗೆ ಅವರ ರುಂಡ ಮುಂಡ ಬೇರೆಯಾಗಿ ಕೆಳಗೆ ಬಿದ್ದಿದೆ.

- Advertisement -

ಇನ್ನು ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕುರುಗೋಡು ಪೊಲೀಸರು ತೆರಳಿ ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಪ್ಪಿತಸ್ಥರ ವಿರುದ್ಧ ಕ್ರಮದ ಭರವಸೆ ನೀಡಿದ್ದಾರೆ.

Join Whatsapp