Home ಟಾಪ್ ಸುದ್ದಿಗಳು ಚುಂಚಿ ಫಾಲ್ಸ್ ಪ್ರವಾಸಕ್ಕೆ ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು

ಚುಂಚಿ ಫಾಲ್ಸ್ ಪ್ರವಾಸಕ್ಕೆ ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು

ಬೆಂಗಳೂರು: ಕನಕಪುರ ತಾಲೂಕಿನ ಪ್ರವಾಸಿತಾಣ ಚುಂಚಿ ಫಾಲ್ಸ್ ಪ್ರವಾಸಕ್ಕೆ ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಉತ್ತರಾಖಂಡ ಮೂಲದ ಅಂಬರ್ ಗಂಗುಲ ಮೃತ ವಿದ್ಯಾರ್ಥಿ. ನಗರದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಮೃತ ವಿದ್ಯಾರ್ಥಿಯು ದೊಮ್ಮಸಂದ್ರದಲ್ಲಿ ಕುಟುಂಬಸ್ಥರೊಂದಿಗೆ ವಾಸವಾಗಿದ್ದರು.

ಐವರು ಸ್ನೇಹಿತರೊಂದಿಗೆ ಕನಕಪುರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಚುಂಚಿ ಫಾಲ್ಸ್ ಗೆ ಬಂದಿದ್ದು ಈಜಲು ನೀರಿಗಿಳಿದ ಅಂಬರ್, ಆಳ ತಿಳಿಯದೆ ಮುಳುಗಿ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳೀಯ ನುರಿತ ಈಜುಗಾರರ ಸಹಾಯದಿಂದ ಶವವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Join Whatsapp
Exit mobile version