Home ಟಾಪ್ ಸುದ್ದಿಗಳು ಪ್ರವಾದಿ ಮುಹಮ್ಮದ್ ಕುರಿತು ಪ್ರಬಂಧ ಸ್ಪರ್ಧೆ: ಶಾಲೆಗೆ ನುಗ್ಗಿದ  ಶ್ರೀರಾಮಸೇನಾ ಕಾರ್ಯಕರ್ತರು

ಪ್ರವಾದಿ ಮುಹಮ್ಮದ್ ಕುರಿತು ಪ್ರಬಂಧ ಸ್ಪರ್ಧೆ: ಶಾಲೆಗೆ ನುಗ್ಗಿದ  ಶ್ರೀರಾಮಸೇನಾ ಕಾರ್ಯಕರ್ತರು

ಗದಗ: ಪ್ರವಾದಿ ಮುಹಮ್ಮದ್ ಅವರ ಕುರಿತು ಪ್ರಬಂಧ ಬರೆಯುವಂತೆ ವಿದ್ಯಾರ್ಥಿಗಳಿಗೆ ಹೇಳಿದ್ದಾರೆಂದು ಆರೋಪಿಸಿ ಶ್ರೀರಾಮಸೇನಾ ಕಾರ್ಯಕರ್ತರು ಶಾಲೆಗೆ ನುಗ್ಗಿ ಮುಖ್ಯೋಪಾಧ್ಯಾಯರನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆ ಗದಗ ಜಿಲ್ಲೆಯ ನಾಗಾವಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.

ಮುಖ್ಯಶಿಕ್ಷಕರು ಶ್ರೀರಾಮಸೇನಾ ಕಾರ್ಯಕರ್ತರು ಶಾಲೆಗೆ ನುಗ್ಗಿ ಮುಖ್ಯೋಪಾಧ್ಯಾಯ ಅಬ್ದುಲ್ ಮುನಾಫರ್ ಬಿಜಾಪುರ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ವಿದ್ಯಾರ್ಥಿಗಳ ಮತಾಂತರಕ್ಕೆ ಪ್ರೋತ್ಸಾಹಿಸುತ್ತಿದ್ದಾರೆ ಎಂದು ಶ್ರೀರಾಮಸೇನಾ ಕಾರ್ಯಕರ್ತರು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳಲ್ಲಿ ಬರಹ ಕೌಶಲ್ಯ ಸುಧಾರಿಸುವ ಸಲುವಾಗಿ ಈ ಬಾರಿ ಪ್ರವಾದಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದ್ದೇವೆ ಎಂದು ಮುಖ್ಯೋಪಾಧ್ಯಾಯ ಅಬ್ದುಲ್  ಅವರು ತಿಳಿಸಿದ್ದಾರೆ.

ಪ್ರತಿ ತಿಂಗಳು ನಾವು ಸ್ಪರ್ಧೆಗಳನ್ನು ನಡೆಸುತ್ತೇವೆ. ಕನಿಷ್ಠ ಒಂದು ಅಥವಾ ಎರಡು ಕಾರ್ಯಕ್ರಮಗಳು ನಡೆಯುತ್ತವೆ. ಕನಕದಾಸರು, ಪುರಂದರ ದಾಸರು ಮತ್ತು ಇತರ ವ್ಯಕ್ತಿಗಳ ಕುರಿತು ಈ ಹಿಂದೆಯೂ ಕಾರ್ಯಕ್ರಮಗಳು ಮತ್ತು ಪ್ರಬಂಧ ಸ್ಪರ್ಧೆಗಳನ್ನು ನಡೆಸಿದ್ದೇವೆ. ವಿದ್ಯಾರ್ಥಿಗಳಿಗೆ ಹಲವು ವ್ಯಕ್ತಿತ್ವಗಳನ್ನು ಪರಿಚಯಿಸಲು ಮತ್ತು ಅವರ ಕೈಬರಹವನ್ನು ಸುಧಾರಿಸಲು ಈ ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸುತ್ತೇವೆ. ಅದರಂತೆ ಈ ಬಾರಿಯೂ ಪ್ರವಾದಿಯವರ ಬಗ್ಗೆ ಪ್ರಬಂಧ ಏರ್ಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Join Whatsapp
Exit mobile version